ರಕ್ಷಿತ ಫ಼ಿಲಂಸ್ ಲಾಂಛನದಲ್ಲಿ ಶೋಭಾಪ್ರಕಾಶ್ ಅವರು ನಿರ್ಮಿಸುತ್ತಿರುವ ‘ಪ್ಯಾರ್ಗೆ ಆಗ್ಬುಟೈತೆ‘ ಚಿತ್ರಕ್ಕೆ ರಾಜೇಶ್ ರಾಮನಾಥ್ ಸ್ಟುಡಿಯೋದಲ್ಲಿ ಹಾಡುಗಳ ಧ್ವನಿಮುದ್ರಣ ನಡೆಯುತ್ತಿದೆ. ಅಭಿಮಾನಿ, ಸೆಂಟ್ರಲ್ಜೈಲ್ ಚಿತ್ರಗಳಿಗೆ ಸಂಗೀತ ನೀಡಿರುವ ಧರ್ಮತೇಜ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿವೆ.
ಮೇ ಹದಿನಾರರಿಂದ ಬೆಂಗಳೂರು, ಮೈಸೂರು, ಸಕಲೇಶಪುರ, ಉಡುಪಿ, ಮಡಿಕೇರಿ, ಮಂಗಳೂರು, ಕಾಸರಗೋಡಿನಲ್ಲಿ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ.
ತಮಿಳಿನಲ್ಲಿ ಒಂದು ಚಿತ್ರ ನಿರ್ದೇಶನ ಮಾಡಿ ಸಾಕಷ್ಟು ಚಿತ್ರಗಳಿಗೆ ಸಹ ನಿರ್ದೇಶನ ಮಾಡಿರುವ ಕವಿನ್ಬಾಲ ಈ ಚಿತ್ರದ ನಿರ್ದೇಶಕರು. ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರದ ನಾಯಕರಾಗಿ ಕೋಮಲ್ ಅಭಿನಯಿಸುತ್ತಿದ್ದಾರೆ. ಬಾಲಭರಣಿ ಛಾಯಾಗ್ರಹಣ, ಸುರೇಶ್ಅರಸ್ ಸಂಕಲನವಿರುವ ಈ ಚಿತ್ರಕ್ಕೆ ಕೇಶವಾದಿತ್ಯ(ರಾಮಜೋಗಿಹಳ್ಳಿ) ಸಂಭಾಷಣೆ ಬರೆದಿದ್ದಾರೆ.