ಶರಣ್ ನಾಯಕರಾಗಿ ನಟಿಸುತ್ತಿರುವ ವಿಜಯದ ಸಂಕೇತ ಸೂಚಿಸುವ ಚಿಹ್ನೆ ಶೀರ್ಷಿಕೆಯಾಗಿರುವ ಚಿತ್ರಕ್ಕೆ ಅರ್ಜುನ್ಜನ್ಯ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ. ಮಂಜರಿ ಸ್ಟುಡಿಯೋದಲ್ಲಿ ಸ್ಪೆಷಲ್ ಎಫೆಕ್ಟ್ ಅಳವಡಿಸಲಾಗುತ್ತಿದೆ. ಚಿತ್ರವನ್ನು ಜುಲೈನಲ್ಲಿ ಬಿಡುಗಡೆಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ.
ಸಂಪೂರ್ಣ ಹಾಸ್ಯಮಯ ಈ ಚಿತ್ರವನ್ನು ನಂದಕಿಶೋರ್ ನಿರ್ದೇಶಿಸುತ್ತಿದ್ದಾರೆ. ಎಸ್.ಆರ್.ಎಸ್ ಮಿಡಿಯಾ ವಿಷನ್ ಎಂಬ ಲಾಂಛನದಲ್ಲಿ ಆನಂದ್ ಆಡಿಯೋದವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶ್ರೀನಾಥ್ ಕಥೆ, ಚಿತ್ರಕಥೆ ಹೆಣೆದಿದ್ದಾರೆ. ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ಜನ್ಯ ಸಂಗೀತ ನೀಡಿದ್ದಾರೆ.
ಚಂದ್ರಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್, ಅಸ್ಮಿತಾ ಸೂದ್, ತಬಲನಾಣಿ, ಅವಿನಾಶ್, ರಮೇಶ್ಭಟ್, ಸಾಧುಕೋಕಿಲಾ ಮುಂತಾದವರಿದ್ದಾರೆ.