ಸೆಂಚುರಿ ಸ್ಟಾರ್ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ‘ಭಜರಂಗಿ’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದೆ. ಚಿತ್ರ ನವಂಬರ್(ಕನ್ನಡ ರಾಜ್ಯೋತ್ಸವ)ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ‘ಭಜರಂಗಿ’ ಚಿತ್ರದ ಚಿತ್ರೀಕರಣ ನಡೆದಿದೆ. ಹೆಸರುಘಟ್ಟ, ಅಭಿಮಾನ್ ಸ್ಟುಡಿಯೋ ಹಾಗೂ ಸಪೋಟ ಗಾರ್ಡನ್ನಲ್ಲಿ ಈ ಚಿತ್ರಕ್ಕಾಗಿ ವಿಶೇಷ ಸೆಟ್ ಹಾಕಲಾಗಿತ್ತು. ಈವರೆಗೂ ಮೂರು ಹಾಡುಗಳ ಚಿತ್ರೀಕರಣ ಸೇರಿದಂತೆ 1೦೦ದಿನ ಚಿತ್ರೀಕರಣ ನಡೆದಿದೆ. ಬಾಕಿಯಿರುವ ಎರಡು ಹಾಡುಗಳ ಚಿತ್ರೀಕರಣ ಸೆಪ್ಟಂಬರ್ನಲ್ಲಿ ನಡೆಯಲಿದೆ.
ಎ.ಹರ್ಷ ಈ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಂದ, ಶಕ್ತಿ ಅವರೊಡನೆ ಚಿತ್ರಕಥೆ ಬರೆದಿರುವ ಹರ್ಷ ಈ ಚಿತ್ರದ ನೃತ್ಯ ನಿರ್ದೇಶಕರೂ ಹೌದು. ಫ಼ಿಲಂ ಎಂಟರ್ಟೈನರ್ ಲಾಂಛನದಲ್ಲಿ ನಟರಾಜ್ಗೌಡ ಹಾಗೂ ಮಂಜು(ಜಾಕ್) ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಜೈಆನಂದ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಅರ್ಜುನ್ಜನ್ಯ ಸಂಗೀತ ನೀಡಿದ್ದಾರೆ. ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. ದೀಪು.ಎಸ್.ಕುಮಾರ್ ಅವರ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ರಮೇಶ್ ಅವರ ನಿರ್ಮಾಣ ನಿರ್ವಹಣೆಯಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ಅಂದ್ರಿತಾ ರೇ, ಊರ್ವಶಿ, ಬುಲೆಟ್ಪ್ರಕಾಶ್, ಸಾಧುಕೋಕಿಲಾ, ತಬಲನಾಣಿ, ಹೊನ್ನವಳ್ಳಿ ಕೃಷ್ಣ, ಶಿವರಾಂ, ಎಂ.ಎಸ್.ಉಮೇಶ್, ಬಿರಾದಾರ್, ಚಿಕ್ಕಣ್ಣ, ಎಂ.ಎನ್.ಲಕ್ಷ್ಮೀದೇವಿ, ಶೃತಿ, ಸಿಲ್ಲಿಲಲ್ಲಿ ಆನಂದ್ ಹಾಗೂ ರಂಗಭೂಮಿ ಕಲಾವಿದರಾದ ಲೋಕಿ, ರಾಜಕುಮಾರ್, ಮಧು, ಚೇತನ್ ಮುಂತಾದವರಿದ್ದಾರೆ.