ಮೀಡಿಯಾ ಹೌಸ್ ಸ್ಟೂಡಿಯೋ ಲಾಂಛನದಲ್ಲಿ ಶ್ರೀಮತಿ ಶೈಲಜಾನಾಗ್ ಹಾಗೂ ಬಿ.ಸುರೇಶ್ ನಿರ್ಮಿಸಿರುವ ‘ಸಕ್ಕರೆ‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು ಅರ್ಹತಾಪತ್ರ ನೀಡಿದೆ. ಚಿತ್ರ ಅಕ್ಟೋಬರ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಅಭಯಸಿಂಹ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಗೋಲ್ಡನ್ಸ್ಟಾರ್ ಗಣೇಶ್ ಅಭಿನಯಿಸಿದ್ದಾರೆ. ದೀಪಾಸನ್ನಿಧಿ, ಅನಂತನಾಗ್, ವಿನಯಾಪ್ರಸಾದ್, ಅನುಪ್ರಭಾಕರ್, ರಾಜೇಶ್, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಡಾ:ವಿಕ್ರಂಶ್ರೀವಾತ್ಸವ್ ಅವರ ಛಾಯಾಗ್ರಹಣವಿದೆ. ಜೋ.ನಿ.ಹರ್ಷ ಸಂಕಲನ, ಹರ್ಷ, ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ, ಮಾಸ್ಮಾದ ಸಾಹಸ ನಿರ್ದೇಶನ, ಶಶಿಧರ್ಅಡಪ ಕಲಾನಿರ್ದೇಶನವಿರುವ ‘ಸಕ್ಕರೆ‘ ಚಿತ್ರದ ಸಂಭಾಷಣೆಯನ್ನು ಸುಮನ್ದೀಪ್ ಬರೆದಿದ್ದಾರೆ.