ಆದಿತ್ಯ ರಮೇಶ್ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಉಮೇಶ್ ರೆಡ್ಡಿ’ ಚಿತ್ರದ ಶೀರ್ಷಿಕೆಯನ್ನು ‘ಖತರ್ನಾಕ್’ ಎಂದು ಬದಲಿಸಲಾಗಿದೆ ಎಂದು ನಿರ್ಮಾಪಕ ಆದಿತ್ಯ ರಮೇಶ್ ತಿಳಿಸಿದ್ದಾರೆ. ಚಿತ್ರ ಅಕ್ಟೋಬರ್ನಲ್ಲಿ ಬಿಡುಗಡೆಯಾಗಲಿದೆ.
ಮಳವಳ್ಳಿ ಸಾಯಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಸಾಧುಕೋಕಿಲ ಹಿನ್ನಲ್ಲೆ ಸಂಗೀತ ನೀಡಿದ್ದಾರೆ. ಎಂ.ಆರ್.ಸೀನು ಛಾಯಾಗ್ರಹಣ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿಕುಮಾರ್ ಕಲಾನಿರ್ದೇಶನವಿರುವ ‘ಖತರ್ನಾಕ್’ ಚಿತ್ರಕ್ಕೆ ಮಲ್ಲಿಕಾರ್ಜುನ್ ಅವರ ಸಹ ನಿರ್ದೇಶನವಿದೆ.
ರವಿಕಾಳೆ, ರವಿವರ್ಮ, ರೂಪಿಕಾ, ಸಾಧುಕೋಕಿಲ, ಬುಲೆಟ್ ಪ್ರಕಾಶ್, ಮುರಳಿಮೋಹನ್, ತುಳಸಿಶಿವಮಣಿ, ರವೀಂದ್ರನಾಥ್, ತುಮಕೂರು ಮೋಹನ್, ಶೋಭಾರಾಘವೇಂದ್ರ, ಶೋಭಿನಾ, ಲೀನಾ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.