ಶಂಕರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಂಕರ್ಗೌಡ ಹಾಗೂ ಶಂಕರ್ರೆಡ್ಡಿ ನಿರ್ಮಿಸಿರುವ ‘ಘರ್ಷಣೆ’ ಚಿತ್ರ ಅಕ್ಟೋಬರ್ನಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ದಯಾಳ್ಪದ್ಮನಾಭನ್ ನಿರ್ದೇಶನದ ಈ ಚಿತ್ರದ ನಾಯಕಿಯಾಗಿ ಮಾಲಾಶ್ರೀ ಅಭಿನಯಿಸಿದ್ದಾರೆ. ಸುಚೀಂದ್ರಪ್ರಸಾದ್, ಪವಿತ್ರಾಲೋಕೇಶ್, ಆಶೀಷ್ ವಿದ್ಯಾರ್ಥಿ, ರವಿಶಂಕರ್, ಮುನಿ, ಗುರುರಾಜ ಹೊಸಕೋಟೆ, ಕಾಶಿ, ಮೈಕೊ ನಾಗರಾಜ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಶ್ಯಾಂಪ್ರಸಾದ್ ಸಂಭಾಷಣೆ ಬರೆದಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನದ ‘ಘರ್ಷಣೆ’ಗೆ ರಾಜೇಶ್ ಅವರ ಛಾಯಾಗ್ರಹಣವಿದೆ. ಶ್ರೀ(ಕ್ರೇಜಿಮೈಂಡ್ಸ್) ಸಂಕಲನ, ಆನಂದ್ ಕಲಾನಿರ್ದೇಶನ, ಮುರಳಿ,ಸ್ವರ್ಣ ನೃತ್ಯ ನಿರ್ದೇಶನ ಹಾಗೂ ರವಿವರ್ಮ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.