ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸುತ್ತಿರುವ ‘ದಿಲ್ರಂಗೀಲಾ’ ಚಿತ್ರಕ್ಕಾಗಿ ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ ‘ಅರ್ಲಿ ಮಾರ್ನಿಂಗು ಬೀಚ್ಗೆ ಬಂದು ಬಿಡಿ’ ಎಂಬ ಹಾಡಿನ ಚಿತ್ರೀಕರಣ ಗೋವಾದಲ್ಲಿ ನಡೆದಿದೆ.
ಮೂವತ್ತೈದು ಲಕ್ಷಕ್ಕೂ ಅಧಿಕ ವೆಚ್ಚದಲ್ಲಿ ಮೂಡಿ ಬಂದಿರುವ ಈ ಹಾಡಿನ ಚಿತ್ರೀಕರಣದಲ್ಲಿ ಗಣೇಶ್, ರಚಿತಾರಾಂ ಹಾಗೂ ರಷ್ಯನ್ ನರ್ತಕರು ಅಭಿನಯಿಸಿದ್ದರು. ಐದು ದಿನಗಳ ಕಾಲ ಚಿತ್ರೀಕರಣಗೊಂಡ ಈ ಹಾಡಿಗೆ ಚಿನ್ನಿಪ್ರಕಾಶ್ ನೃತ್ಯ ನಿರ್ದೇಶನ ಮಾಡಿದ್ದಾರೆ.
ಗೋಲ್ಡನ್ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರೀತಂಗುಬ್ಬಿ ನಿರ್ದೇಶಿಸುತ್ತಿದ್ದಾರೆ. ರಚಿತರಾಂ, ಪ್ರಿಯಾಂಕರಾವ್, ದತ್ತಣ್ಣ, ರಂಗಾಯಣರಘು, ಅಚ್ಯುತಕುಮಾರ್, ಯಮುನ, ಶ್ರೀನಿಧಿ, ಗಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಅರ್ಜುನ್ಜನ್ಯ ಸಂಗೀತ ನಿರ್ದೇಶನ, ದೀಪು.ಎಸ್.ಕುಮಾರ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಯೋಗಿ ಸಹನಿರ್ದೇಶನವಿರುವ ‘ದಿಲ್ರಂಗೀಲಾ’ಕ್ಕೆ ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್ಭಟ್, ಜಯಂತಕಾಯ್ಕಿಣಿ ಗೀತರಚನೆ ಮಾಡಿದ್ದಾರೆ.