ಆರ್.ಎಸ್.ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್.ಶ್ರೀನಿವಾಸ್ ಅವರು ನಿರ್ಮಿಸುತ್ತಿರುವ ‘ಬಹದ್ದೂರ್‘ ಚಿತ್ರಕ್ಕೆ ನಗರದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈವರೆಗೂ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಮದ್ದೂರು, ಅನೇಕಲ್ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ನಡೆದಿದೆ.
‘ಅದ್ದೂರಿ’ ಚಿತ್ರದ ಮೂಲಕ ಅಭಿಮಾನಿಗಳ ಮನಗೆದ್ದಿರುವ ಧ್ರುವಸರ್ಜಾ ಈ ಚಿತ್ರದ ನಾಯಕ. ರಾಧಿಕಾಪಂಡಿತ್ ನಾಯಕಿ. ‘ಅದ್ದೂರಿ’ ನಿರ್ದೇಶಕ ಅರ್ಜುನ್ಗೆ ಸಹಾಯಕರಾಗಿ ಹಾಗೂ ರಜನಿಕಾಂತ, ಪುಲಕೇಶಿ, ವರದನಾಯಕ ಮುಂತಾದ ಚಿತ್ರಗಳಿಗೆ ಹಾಡು ಬರೆದಿರುವ ಚೇತನ್ಕುಮಾರ್ ಈ ಚಿತ್ರದ ನಿರ್ದೇಶಕ. ‘ಬಹದ್ದೂರ್’ ಚೇತನ್ಕುಮಾರ್ ನಿರ್ದೇಶನದ ಚೊಚ್ಚಲ ಚಿತ್ರ.
ಅರ್ಜುನ್ಜನ್ಯರ ಸಂಗೀತವಿರುವ ಈ ಚಿತ್ರಕ್ಕೆ ಶ್ರೀಶ ಕುದುವಳ್ಳಿ ಅವರ ಛಾಯಾಗ್ರಹಣವಿದೆ. ರವಿವರ್ಮ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಎ.ಹರ್ಷ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಕೆ.ಪಿ.ಶ್ರೀಕಾಂತ್ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.