ಡಿ.ಕೇಶವ್ ಫ಼ಿಲಂಸ್ ಲಾಂಛನದಲ್ಲಿ ಡಿ.ಕಮರ್ ಅವರು ನಿರ್ಮಿಸುತ್ತಿರುವ ‘ಆರ್ಯನ್’ ಚಿತ್ರಕ್ಕೆ ಇದೇ ತಿಂಗಳ ಹದಿನಾರರಿಂದ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ.
ಖ್ಯಾತ ನಿರ್ದೆಶಕ ಡಿ.ರಾಜೇಂದ್ರಬಾಬು ನಿರ್ದೇಶಿಸುತ್ತಿರುವ ಈ ಚಿತ್ರದ ನಾಯಕರಾಗಿ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಅಭಿನಯಿಸುತ್ತಿದ್ದಾರೆ. ರಮ್ಯ ನಾಯಕಿಯಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರತ್ಬಾಬು, ಬುಲೆಟ್ಪ್ರಕಾಶ್, ವಿನಯಾಪ್ರಸಾದ್, ಅರ್ಚನಾಗುಪ್ತ ಮುಂತಾದವರಿದ್ದಾರೆ.
ಚಂದ್ರಶೇಖರ್ ಛಾಯಾಗ್ರಾಹಕರಾಗಿರುವ ಈ ಚಿತ್ರಕ್ಕೆ ಜನಾರ್ದನ್ ಮಹರ್ಷಿ ಸಂಭಾಷಣೆ ಬರೆದಿದ್ದಾರೆ. ಜೆಸ್ಸಿಗಿಫ಼್ಟ್ ಸಂಗೀತ ನಿರ್ದೇಶನದ ‘ಆರ್ಯನ್’ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಕವಿರಾಜ್, ಯೋಗರಾಜಭಟ್, ನಾಗೇಂದ್ರಪ್ರಸಾದ್ ಬರೆದಿದ್ದಾರೆ.