B T M Layout : 'ಎಡಿಜಿಪಿ' ರವೀಂದ್ರನಾಥ್ ಅವರು ಕಾಫಿಶಾಪ್ ನಲ್ಲಿ ಯುವತಿಯ ಫೋಟೋ ತೆಗೆದ ಪ್ರಕರಣದಲ್ಲಿ ರವೀಂದ್ರನಾಥ್ ಅವರಿಗೆ ಬೆಂಬಲಿಸಿ ಪ್ರತಿಭಟನೆ ನಡೆಸಿದ್ದ ಕೆ.ಎಸ್.ಆರ್.ಪಿಯ 1ನೇ ಬೆಟಾಲಿಯನ್ ಪೇದೆ ಗೋಪಿ ಆ.11ರಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಯುವತಿ ಫೊಟೋ ತೆಗೆದ ಪ್ರಕರಣದ ಹಿನ್ನೆಲೆಯಲ್ಲಿ ಎಡಿಜಿಪಿ ರವೀಂದ್ರನಾಥ್ ಅವರನ್ನು ಅಮಾನತುಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಕೆ.ಎಸ್.ಆರ್.ಪಿ ಸಿಬ್ಬಂಧಿಗಳು ಪ್ರತಿಭಟನೆ ನಡೆಸಿದ್ದರು. ಆತ್ಮಹತ್ಯೆಗೆ ಯತ್ನಿಸಿರುವ ಗೋಪಿಯೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಎಂದು ತಿಳಿದುಬಂದಿದೆ. ಪ್ರತಿಭಟನೆ ನಡೆಸಿದ್ದರವರ ಮೇಲೆ ಕೆ.ಎಸ್.ಆರ್.ಪಿ ಕಾಯ್ದೆ 6ರಡಿಯಲ್ಲಿ ಇಲಾಖಾ ತನಿಖೆ ನಡೆಸಲು ಆದೇಶಿಸಲಾಗಿತ್ತು. 80 ಪೇದೆಗಳೊಂದಿಗೆ ಗೋಪಿ ಅವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ಎದುರಿಸಿದ್ದರಿಂದ ಮಾನಸಿಕವಾಗಿ ನೊಂದು ಕೆಲಸ ಕಳೇದುಕೊಳ್ಳುವ ಭೀತಿಯಿಂದ ಗೋಪಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗಿದೆ.
ಆ.11ರ ಬೆಳಿಗ್ಗೆ ಕೋರಮಂಗಲದಲ್ಲಿರುವ ಕೆ.ಎಸ್.ಆರ್.ಪಿ ಕ್ವಾರ್ಟರ್ಸ್ ನಲ್ಲಿ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಪೇದೆಯನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.