Untitled Document
Sign Up | Login    
Dynamic website and Portals
  
August 11, 2014

ಕೆ.ಪಿ.ಎಸ್.ಸಿ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯ, ಎ.ಜಿ ರಾಜೀನಾಮೆಗೆ ಹೆಚ್.ಡಿ.ಕೆ ಒತ್ತಾಯ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು : 2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ರದ್ದತಿ ಪೂರ್ವನಿಯೋಜಿತ, ನೇಮಕಾತಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಡೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅವರು ಭಾಗಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎ.ಜಿ ರವಿವರ್ಮ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವೇ ವಿಶೇಷ ಅಧಿವೇಶನ ಕರೆದು ತಮ್ಮ 12 ಪ್ರಶ್ನೆಗಳಿಗೆ ಸಮಜಾಯಿಶಿ ನೀಡಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಆ.11ರಂದು ವಿಧಾನಸೌಧದಲ್ಲಿ ಡಾ.ಮೈತ್ರಿ ಅವರ ದೂರವಾಣಿ ಕರೆ ದಾಖಲೆಗಳನ್ನು ಕುಮಾರಸ್ವಾಮಿ ಬಹಿರಂಗಗೊಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮಹತ್ವದ ದೂರವಾಣಿ ಕರೆ ದಾಖಲೆಗಳನ್ನು ಸೂಕ್ತ ಸಮಯದಲ್ಲಿ ಬಹಿರಂಗಗೊಳಿಸುವುದಾಗಿ ಹೇಳಿದ್ದಾರೆ.

2011ರ ಕೆ.ಪಿ.ಎಸ್.ಸಿ ಪರೀಕ್ಷೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿರುವ ಡಾ.ಮೈತ್ರಿ ಬಗ್ಗೆ ಮುಖ್ಯಮಂತ್ರಿ ಅವರಿಗೇಕೆ ಕನಿಕರ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದರ್ಶನದ ವೇಳೆ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಮಂಗಳಾ ಶ್ರೀಧರ್ ಅವರಿಗೆ 70 ಬಾರಿ ಕರೆ ಮಾಡಿದ್ದು ಏಕೆ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ನೇಮಕಾತಿ ಹಗರಣದ ತನಿಖೆ ನಡೆಸಿರುವ ಸಿ.ಐ.ಡಿ ವರದಿಯಲ್ಲಿ ಮುಖ್ಯಮಂತ್ರಿಗಳು ಕರೆ ಮಾಡಿರುವುದರ ಬಗ್ಗೆ ಉಲ್ಲೇಖವಿಲ್ಲ. ಸಿ.ಐ.ಡಿ ವರದಿ ದೋಷಪೂರಿತವಾಗಿದೆ. ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗುವುದೆಂದು ಹೆಚ್.ಡಿ.ಕೆ ತಿಳಿಸಿದ್ದಾರೆ.

ಗೃಹ ಸಚಿವ ಜಾರ್ಜ್ ಸಲಹೆಗಾರ, ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರ ಸಂಬಂಧಿ ಕೆ.ಪಿ.ಎಸ್.ಸಿ ಪರೀಕ್ಷೆ ಬರೆದಿದ್ದರು. ಆದರೆ ಆಯ್ಕೆ ಪಟ್ಟಿಯಲ್ಲಿ ಅವರ ಹೆಸರಿಲ್ಲದ ಕಾರಣ, ನೇಮಕಾತಿ ಪ್ರಕ್ರಿಯೆಯನ್ನೇ ರದ್ದುಗೊಳಿಸಲಾಗಿದೆ. ಈ ಮೂಲಕ ಸಿದ್ದರಾಮಯ್ಯ ಸರ್ಕಾರದ ಅಧಿಕಾರವನ್ನು ದುರುಪಯೋಗ ಮಾಡಿದೆ. ಆಯ್ಕೆ ಪಟ್ಟಿಯನ್ನು ರದ್ದುಗೊಳಿಸುವ ಅಧಿಕಾರ ಸರ್ಕಾರಕ್ಕಿಲ್ಲ, ವಿಧಾನಸಭೆ ಅಥವಾ ವಿಧಾನ ಪರಿಷತ್ ಮಾತ್ರವೇ ಆಯ್ಕೆ ಪಟ್ಟಿ ರದ್ದುಗೊಳಿಸಬಹುದಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದೇ ವೇಳೆ ಕೆ.ಪಿ.ಎಸ್.ಸಿಯ ಈ ಸ್ಥಿತಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಕಾರಣ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited