Untitled Document
Sign Up | Login    
Dynamic website and Portals
  
August 14, 2014

ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಚಾಲಕ ಹುದ್ದೆ ತೊರೆಯಲಿ: ಶಾಂತಿ ಭೂಷಣ್

ನವದೆಹಲಿ : ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವವಿಲ್ಲ. ಯಾವುದೇ ವಿಚಾರಗಳಲ್ಲಿ ನಿರ್ಧಾರಗಳನ್ನು ಕೈಗೊಳ್ಳುವಾಗ ಇತರರ ಜತೆ ಸಮಾಲೋಚನೆ ನಡೆಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೇಜ್ರಿವಾಲ್ ಒಬ್ಬ ಬುದ್ಧಿವಂತ. ಉತ್ತಮ ತಂತ್ರಗಾರ. ಆದರೆ ಒಂದು ಪಕ್ಷದ ಸಂಘಟನೆ ಮುನ್ನಡೆಸಲು ಬೇಕಾದ ಕೌಶಲ್ಯಗಳು ಅವರಲ್ಲಿಲ್ಲ. ಹೀಗಾಗಿ ಪಕ್ಷದ ಸಂಚಾಲಕ ಹುದ್ದೆಯಿಂದ ಕೆಳಗಿಳಿದು ಬೇರೊಬ್ಬರಿಗೆ ಅವಕಾಶ ನೀಡಲಿ. ಪಕ್ಷದ ಮುಖ್ಯ ಪ್ರಚಾರಕರಾಗಿ ಅವರು ಮುಂದುವರೆಯಲಿ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸೋತ ಬಳಿಕ ಶಾಜಿಯಾ ಇಲ್ಮಿ ,ನಾಯಕತ್ವದ ವಿರುದ್ಧ ಅಸಮಾಧಾನ ಹೊರಹಾಕಿ ಪಕ್ಷದಿಂದ ಹೊರನಡೆದಿದ್ದರು. ಹರ್ಯಾಣಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಬಗ್ಗೆ ಪಕ್ಷ ತೆಗೆದುಕೊಂಡ ನಿರ್ಧಾರದಿಂದ ಹಿರಿಯ ನಾಯಕ ಯೋಗೇಂದ್ರ ಯಾದವ್ ಕೂಡ ಅಸಮಾಧಾನ ಹೊರಹಾಕಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited