Untitled Document
Sign Up | Login    
Dynamic website and Portals
  
August 15, 2014

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಸೋನಿಯಾ,ರಾಹುಲ್ ಕಾರಣರಲ್ಲ

ಆಂಟನಿ ನೇತೃತ್ವದ ಸಮಿತಿ ವರದಿ ಸಲ್ಲಿಕೆ

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.

ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು, ಪಕ್ಷದ ಸೋಲಿಗೆ ರಾಹುಲ್ ಗಾಂಧಿಯೇ ಕಾರಣ ಎಂದು ಹೇಳುವುದು ಸರಿಯಲ್ಲ. ಕಾಂಗ್ರೆಸ್ ಸೋಲಿಗೆ ಹಲವಾರು ಕಾರಣಗಳಿವೆ ಎಂದು ಹೇಳಲಾಗಿದೆ.

ಲೋಕಸಭಾ ಚುನಾವಣೆಯ ವೇಳೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಹೆಚ್ಚ್ಗು ಶ್ರಮಿಸಿದ್ದಾರೆ. 500ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರ ಜತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಪಕ್ಷದ ಸೋಲಿಗೆ ಅವರಿಬ್ಬರೇ ಕಾರಣ ಎಂದು ಹೇಳುವುದು ಸರಿಯಲ್ಲ ಎಂದು ವರದಿಯಲ್ಲಿ ಸಮರ್ಥಿಸಿಕೊಳ್ಳಲಾಗಿದೆ.

ಯುಪಿಎ ಸರ್ಕಾರದ ಎರಡು ಅವಧಿಯಲ್ಲಿ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಮಾಡಲಾಗಿತ್ತು. ಇದನ್ನು ಜನರಿಗೆ ತಲುಪಿಸುವಲ್ಲಿ ಹಾಗೂ ನಮ್ಮ ಕೆಲಸಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದೇವೆ. ಇದು ಕೂಡ ಸೋಲಿಗೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಾದ ಕರ್ನಾಟಕ, ಮಹಾರಾಷ್ಟ್ರ, ಹರ್ಯಾಣ, ಉತ್ತರಾಖಂಡಗಳಲ್ಲಿ ಕೂಡ ನಿರೀಕ್ಷಿತ ಗೆಲುವು ಸಾಧಿಸಿಲ್ಲ. ವಿಪಕ್ಷಗಳ ಅಪಪ್ರಚಾರ ಕೂಡ ಕಾಂಗ್ರೆಸ್ ಸೋಲಿಗೆ ಕಾರಣ ಎನ್ನಲಾಗಿದೆ.

ಹಲವೆಡೆ ಪಕ್ಷ ಸಂಘಟನೆಯ ಕೊರತೆಯಿದ್ದು, ಪಕ್ಷವನ್ನು ಪುನರ್ ಸಂಘಟನೆ ಮಾಡುವತ್ತ ಗಮನಹರಿಸಬೇಕಿದೆ ಎಂದು ಸಮಿತಿ ಹೇಳಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited