Untitled Document
Sign Up | Login    
Dynamic website and Portals
  
August 15, 2014

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕೆ ಮಾತ್ರ ಸೀಮಿತ: ಪರಮೇಶ್ವರ್

ಪರಮೇಶ್ವರ್ ಪರಮೇಶ್ವರ್

ಬೆಂಗಳೂರು : ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಶಿಕಾರಿಪುರಕ್ಕಷ್ಟೇ ಸೀಮಿತ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸ್ವಾತಂತ್ರೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಆ.21ರಂದು ನಡೆಯಲಿರುವ ಮೂರುಕ್ಷೇತ್ರಗಳ ಉಪಚುನಾವಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಿಕಾರಿಪುರದಲ್ಲಿ ಜೆಡಿಎಸ್, ಬಿಜೆಪಿಯ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್ ಜತೆ ಕೈಜೋಡಿಸಲು ಮುಂದಾದಾಗ ನಾವು ಸಹಮತ ವ್ಯಕ್ತಪಡಿಸಿದ್ದೇವೆ. ಇದು ಈ ಕ್ಷೇತ್ರಕ್ಕೆ ಮಾತ್ರ ಸೀಮಿತ. ಯಾರನ್ನೂ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡಿಲ್ಲ ಎಂದು ತಿಳಿಸಿದರು.

ಬಳ್ಳಾರಿ ಉಪಚುನಾವಣೆಯ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಡಿ.ಕೆ.ಶಿವಕುಮಾರ್, ಅಲ್ಲಿನ ಸ್ಥಳೀಯ ಮುಖಂಡ ಸೋಮಶೇಖರ್ ರೆಡ್ಡಿ ಅವರ ಮನೆಗೆ ಹೋಗಿರುವುದು ಖಾಸಗಿ ವಿಷಯ ಹೊರತು ರಾಜಕಾರಣಕ್ಕಾಗಿ ಅಲ್ಲ. ಈ ಬಗ್ಗೆ ಕೆ.ಎಸ್.ಈಶ್ವರಪ್ಪ ಅವರ ಟೀಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಕ್ಕರೆ ಅದೇ ಸ್ವಾತಂತ್ರ್ಯ. ಸ್ವಾಭಿಮಾನದ ಬದುಕು ಮುಖ್ಯ ಎಂದು ಪರಮೇಶ್ವರ್ ಹೇಳಿದರು.

ಮಹಿಳೆಯರು, ಮಕ್ಕಳು, ಯುವಕರಿಗಾಗಿ ಒಂದು ಹೊಸ ಕಾರ್ಯಕ್ರಮ ಅ.2ರಿಂದ ಜಾರಿಗೆ ಬರಲಿದೆ ಎಂದ ಅವರು, ಪಕ್ಷಕ್ಕಾಗಿ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದಾರೆ. ಅವರೆಲ್ಲರಿಗೂ ನ್ಯಾಯ ಕೊಡಿಸಬೇಕಾದ ಹೊಣೆ ನಮ್ಮ ಮೇಲಿದೆ. ಅಧಿಕಾರ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ಮುಂದಿನದಿನಗಳಲ್ಲಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited