Untitled Document
Sign Up | Login    
Dynamic website and Portals
  
August 18, 2014

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ಜೆಡಿಎಸ್ ನಲ್ಲಿ ಹಣವಿಲ್ಲ: ಹೆಚ್.ಡಿ.ದೇವೇಗೌಡ

ಬೆಂಗಳೂರು : ನನಗೆ ರಾಜಕೀಯ ಅನುಭವವಿಲ್ಲ, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಹಣವಿಲ್ಲ, ಪಕ್ಷದ ಕಛೇರಿಯನ್ನೂ ಕಿತ್ತುಕೊಳ್ಳಲಾಗುತ್ತಿದೆ ಎಂದರು.

ಪಕ್ಷದ ಮುಖಂಡರಲ್ಲಿ ಯಾವುದೇ ಭಿನ್ನಾಭಿಪ್ರಾಯವಿದ್ದರೂ ಮುಕ್ತವಾಗಿ ನಮ್ಮೊಂದಿಗೆ ಚರ್ಚಿಸಿ, ಸ್ವತ: ನಾನೇ ಬಂದು ನಾಯಕರ ಜತೆ ಚರ್ಚಿಸಿ ಭಿನ್ನಾಭಿಪ್ರಾಯ ಶಮನಮಾಡುತ್ತೇನೆ. ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ತಿಳಿಸಿದರು.

ರಾಜ್ಯದಲ್ಲಿ ಏನೆಲ್ಲ ಘಟನೆಗಳು ನಡೆಯುತ್ತಿವೆ, ಯಾರು ಯಾರನ್ನು ಭೇಟಿಯಾಗಿದ್ದರು, ಶಾಸಕರುಗಳಿಗೆ ಏನೆಲ್ಲ ಆಮಿಷ ಒಡ್ಡಲಾಗುತ್ತಿದೆ ಎಂಬುದು ನನಗೆ ಗೊತ್ತಿದೆ. ಕಾಂಗ್ರೆಸ್ ಪಕ್ಷ ದೇಶದ ಹಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಖಾತೆಯನ್ನೇ ತೆರೆದಿಲ್ಲ. ಹೀಗಿರುವ ಸಂದರ್ಭದಲ್ಲಿ ಉಪಚುನಾವಣೆಯಲ್ಲಿ ಜೆಡಿಎಸ್ ಶಾಸಕರನ್ನು ಸೆಳೆಯಲು ಕೈಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ.ರೇವಣ್ಣ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡಿದ್ದನ್ನು ಹಲವರು ಹಲವು ರೀತಿಯಲ್ಲಿ ಭಾವಿಸಿದರು, ದೇವೇಗೌಡರ ಕುಟುಂಬದಲ್ಲಿ ಒಡಕು ಉಂಟಾಗಿದೆ. ಕುಮಾರಸ್ವಾಮಿ ಕಾಂಗ್ರೆಸ್ ಗೆ ಹೋಗುತ್ತಾರೆ ಎಂಬಿತ್ಯಾದಿ ಸುದ್ದಿ ಹಬ್ಬಿಸಿದ್ದರು. ಎಲ್ಲಾ ವಿಷಯಗಳೂ ತಮಗೆ ತಿಳಿದಿದೆ. ಪಕ್ಷ ಸಂಘಟಿಸಲು ತಮಗೆ ಇನ್ನೂ ಶಕ್ತಿಯಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರನ್ನು ಹುರಿದುಂಬಿಸುವುದಾಗಿ ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited