ನವದೆಹಲಿ : ಬೆಂಗಳೂರು ಸರಣಿ ಬಾಂಬ್ ಸ್ಪೋಟದ ರೂವಾರಿ ಅಬ್ದುಲ್ ನಾಸೀರ್ ಮದನಿ ಮಧ್ಯಂತರ ಜಾಮೀನು ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಿ ಸುಪ್ರಿಂ ಕೋರ್ಟ್ ಆದೇಶ ನೀಡಿದೆ.
ಅನಾರೋಗ್ಯ ನಿಮಿತ್ತ ಮದನಿಗೆ ಸುಪ್ರೀಂ ಕೋರ್ಟ್ ಜು.11ರಂದು ಒಂದು ತಿಂಗಳ ಕಾಲ ಷರತ್ತುಬದ್ಧ ಜಾಮೀನು ನೀಡಿತ್ತು. ಆ.11ರಂದು ವಿಸ್ತರಣೆಯಾಗಿದ್ದ ಜಾಮೀನಿನ ಅವಧಿ ಆ.22ಕ್ಕೆ ಮುಕ್ತಾಯವಾದ ಹಿನ್ನಲೆಯಲ್ಲಿ ಮತ್ತೆ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತ್ತು. ಆ.22ರಿಂದ ಒಂದು ತಿಂಗಳ ಕಾಲ ಜಾಮೀನು ಅವಧಿ ವಿಸ್ತರಣೆ ಮಾಡಲಾಗಿದೆ.
ಕಣ್ಣಿನ ಸಮಸ್ಯೆ, ಮಧುಮೇಹ, ರಕ್ತದೊತ್ತಡ ಸೇರಿ ಹಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿರುವ ಮದನಿ ಆರೋಗ್ಯದಲ್ಲಿ ಸಂಪೂರ್ಣ ಚೇತರಿಕೆಯಾಗದ ಕಾರಣ ಜಾಮೀನು ಅವಧಿ ವಿಸ್ತರಣೆ ಮಾಡಬೇಕೆಂದು ವಿಚಾರಣೆ ವೇಳೆ ಮದನಿ ಪರ ವಕೀಲರು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಮದನಿ ಜಾಮೀನು ಅವಧಿ ವಿಸ್ತರಣೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು.
ಉಗ್ರ ಮದನಿ ಆರೋಗ್ಯ ಸಂಪೂರ್ಣವಾಗಿ ಚೇತರಿಕೆಯಾಗದ ಕಾರಣ ಜಾಮೀನು ಅರ್ಜಿ ವಿಸ್ತಣೆ ಮಾಡಲಾಗಿದೆ. ಅಬ್ದುಲ್ ನಾಸೀರ್ ಮದನಿ 2008 ಜುಲೈ 25ರಂದು ಬೆಂಗಳೂರಿನಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಪೊಟದ ಪ್ರಮುಖ ಆರೋಪಿಯಾಗಿದ್ದು, 2010ರಂದು ಬೆಂಗಳೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದರು.
ಅನಾರೋಗ್ಯ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಜು.11ರಂದು ಮದನಿಗೆ ಜಾಮೀನು ಮಂಜೂರು ಮಾಡಲಾಗಿತ್ತು.