ಉತ್ತರ ಪ್ರದೇಶ : 'ಉತ್ತರ ಪ್ರದೇಶ'ದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ವಿಷಯಗಳನ್ನು ಪ್ರಮುಖವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಲವ್ ಜಿಹಾದ್, ಮತಾಂತರ ಪ್ರಕರಣಗಳಿಗೆ ಕಡಿವಾಣ ಹಾಕುವ ಬಗ್ಗೆ ಮಥುರಾದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಉತ್ತರ ಪ್ರದೇಶದಲ್ಲಿ ಹಿಂದೂ ಯುವತಿಯರನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಲವ್ ಜಿಹಾದ್ ನಡೆಸಲಾಗುತ್ತಿದೆ. ಇಂತಹ ಪ್ರಕರಣಗಳನ್ನು ತಡೆಗಟ್ಟಲು ಆರ್.ಎಸ್.ಎಸ್ ಇತ್ತೀಚೆಗಷ್ಟೇ ಲವ್ ಜಿಹಾದ್ ವಿರುದ್ಧ ಜಾಗೃತಿ ಜಾಥ ಹಮ್ಮಿಕೊಂಡಿತ್ತು. ಹಿಂದೂ ಯುವತಿಯರಿಗೆ ಎದುರಾಗಿರುವ ಅಪಾಯವನ್ನು ನಿವಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಈ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ 2017ಕ್ಕೆ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆ ಸಿದ್ಧತೆ ಬಗ್ಗೆಯೂ ಚರ್ಚೆ ನಡೆಸಲಾಗುತ್ತದೆ.