ಬೆಂಗಳೂರು : ಆಡಳಿತಾರೂಢ ಕಾಂಗ್ರೆಸ್ ಮತ್ತು ವಿಪಕ್ಷ ಬಿಜೆಪಿ ನಡುವಿನ ತೀವ್ರ ರಾಜಕೀಯ ಜಿದ್ದಾಜಿದ್ದಿನ ನಡುವೆ ನಡೆದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆ ಮತ ಎಣಿಕೆ ಆರಂಭವಾಗಿದೆ.
ಶಿಕಾರಿಪುರ, ಬಳ್ಳಾಗ್ರಾಮಾಂತರ ಮತ್ತು ಚಿಕ್ಕೋಡಿ-ಸದಲಗಾ ಕ್ಷೇತ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.
ಬಳ್ಳಾರಿಯಲ್ಲಿ ಕಾಂಗ್ರೆಸ್ ಭಾರೀ ಮುನ್ನಡೆ ಸಾಧಿಸಿದ್ದು, 6ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ 18,063ಮತಳಿಂದ ಎನ್.ವೈ.ಗೋಪಾಲಕೃಷ್ಣ ಮುನ್ನಡೆಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಓಬಳೇಶ್ 18,534 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.
ಶಿಕಾರಿಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 20,916ಮತಗಳಿಂದ ಮತಗಳಿಂದ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ 14,900ಮತಗಳ ಮೂಲಕ ಹಿನ್ನಡೆ ಸಾಧಿಸಿದ್ದಾರೆ.
ಚಿಕ್ಕೋಡಿ-ಸದಲಗಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಣೇಶ್ ಹುಕ್ಕೇರಿ 18,839 ಮತಗಳ ಮೂಲಕ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮಹಾಂತೇಶ್ ಕಟವಟಗಿಮಠ 11,276 ಮತಗಳ ಮೂಲಕ ಹಿನ್ನಡೆ ಸಾಧಿಸಿದ್ದಾರೆ.
ಉಪಚುನಾವಣೆಯ ಸೂಲು-ಗೆಲುವು ಮುಖ್ಯಮಂತ್ರಿ ಸಿದ್ದರಾಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ನೇರ ಪರಿಣಾಮ ಬೀರುವುದಿಲ್ಲ. ಆದರೆ ಫಲಿತಾಂಶ ಜನಾದೇಶ ಹೌದೋ, ಅಲ್ಲವೋ ಎಂಬ ಬಗ್ಗೆ ಚರ್ಚೆಯಾಗುವುದತು ನಿಜ.