ಜಮ್ಮು-ಕಾಶ್ಮೀರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್ ಕೌಂಟರ್ ನಲ್ಲಿ 5 ಉಗ್ರರ ಹತ್ಯೆ ಮಾಡಲಾಗಿದೆ.
ಉಗ್ರರು ಹಾಗೂ ಸೇನಾ ಪಡೆಯ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಪಡೆ 5 ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇದೇ ಘಟನೆಯಲ್ಲಿ 3 ಯೋಧರೂ ಸಾವನ್ನಪ್ಪಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಅಡಗಿ ಕುಳಿತಿದ್ದ ಉಗ್ರರ ಮೇಲೆ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವುದರಿಂದ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಕೆರೆನ್ ಪ್ರದೇಶದಲ್ಲಿ ಯ್ತೋಧರು ಮತ್ತು ಭಯೋತ್ಪಾದಕರ ನಡುವೆ ಕಾಳಗ ನಡೆದಿದ್ದು ಓರ್ವ ಸೈನಿಕ ಸಾವನ್ನಪ್ಪಿದ್ದಾನೆ.
ಅತ್ತ ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗುತ್ತಿದ್ದರೆ ಇತ್ತ ಉಗ್ರರ ಉಪಟಳ ಹೆಚ್ಚಿದೆ. ಉಗ್ರರು, ಪಾಕಿಸ್ತಾನ ಯೋಧರ ನಿರಂತರ ದಾಳಿಯ ಪರಿಣಾಮ ಎಲ್.ಒ.ಸಿ ಬಳಿ ಇರುವ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ರವಾನೆ ಮಾಡಲಾಗಿದೆ.
ಗಡಿ ಭಾಗದಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಸೂಕ್ತ ಪಾಠ ಕಲಿಸಿ ಎಂದು ಕೇಂದ್ರ ಸರ್ಕಾರ ಸೇನಾಪಡೆಗಳಿಗೆ ಆದೇಶ ನೀಡಿದೆ.