Untitled Document
Sign Up | Login    
Dynamic website and Portals
  
August 28, 2014

ಎಲ್.ಪಿ.ಜಿ ಗ್ರಾಹಕರಿಗೆ ಕೇಂದ್ರ ಸರ್ಕಾರದಿಂದ ಹಬ್ಬದ ಕೊಡುಗೆ

Cylinder (File Pic) Cylinder (File Pic)

ನವದೆಹಲಿ : ಸಬ್ಸಿಡಿಯುಕ್ತ ಅಡುಗೆ ಅನಿಲ (ಎಲ್.ಪಿ.ಜಿ ಸಿಲಿಂಡರ್) ಖರೀದಿ ಮೇಲೆ ಯುಪಿಎ ಸರ್ಕಾರ ವಿಧಿಸಿದ್ದ ನಿರ್ಬಂಧವನ್ನು ಕೇಂದ್ರ ಸಚಿವ ಸಂಪುಟ ಆ.27ರಂದು ರದ್ದುಗೊಳಿಸಿದೆ.

ಸಚಿವ ಸಂಪುಟದ ಈ ನಿರ್ಧಾರದಿಂದ ಸಬ್ಸಿಡಿಯುಕ್ತ 14.2 ಕಿಲೋದ 12 ಎಲ್.ಪಿ.ಜಿ ಸಿಲಿಂಡರ್ ಗಳನ್ನು ಗ್ರಾಹಕರು ವರ್ಷದ ಯಾವುದೇ ತಿಂಗಳಲ್ಲೂ ಖರೀದಿಸಬಹುದಾಗಿದೆ. ಅಂದರೆ ತಿಂಗಳಿಗೆ ಒಂದಕ್ಕಿಂತ ಹೆಚ್ಚು ಸಿಲಿಂಡರ್ ಗಳನ್ನು ಖರೀದಿಸಬಹುದಾಗಿದೆ.

ಕಳೆದ ಫೆಬ್ರವರಿಯಲ್ಲಿ ಸಬ್ಸಿಡಿಯುಕ್ತ ಎಲ್.ಪಿ.ಜಿ ಸಿಲಿಂಡರ್ ಗಳ ಮಿತಿಯನ್ನು ಯುಪಿಎ ಸರ್ಕಾರ 9ರಿಂದ 12ಕ್ಕೆ ಏರಿಕೆ ಮಾಡಿತ್ತು. ಈ ಮೂಲಕ ತಿಂಗಳಿಗೆ ಒಂದು ಸಿಲಿಂಡರ್ ಖರೀದಿಗೆ ಅವಕಾಶ ನೀಡಿತ್ತು.

ಕೆಲವೊಂದು ಸಂದರ್ಭದಲ್ಲಿ ಒಂದು ತಿಂಗಳ ಅವಧಿ ಮುಗಿದರೂ ಗ್ರಾಹಕರ ಬಳಿ ಅಡುಗೆ ಅನಿಲ ಸಿಲಿಂಡರ್ ಖಾಲಿಯಾಗಿರುವುದಿಲ್ಲ. ಇನ್ನೂ ಕೆಲವೊಮ್ಮೆ ಹಬ್ಬಗಳ ಸಂದರ್ಭದಲ್ಲಿ ತಿಂಗಳಿಗೆ ಒಂದಕ್ಕಿಂತಲೂ ಹೆಚ್ಚು ಸಿಲಿಂಡರ್ ಬೇಕಾಗಬಹುದು ಇಂತಹ ಸಂದರ್ಭಗಳಲ್ಲಿ ಒಂದೇ ಸಿಲಿಂಡರ್ ಖರೀದಿಸಬಹುದು ಎಂಬ ಮಿತಿಯಿಂದಾಗಿ ಗ್ರಾಹಕರು ತೊಂದರೆಗೆ ಸಿಲುಕಿಕೊಳ್ಳಲಿದ್ದಾರೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಈ ನಿರ್ಧಾರ ಕೈಗೊಂಡಿದೆ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Infrastructure

ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ಎನ್ ಜಿಟಿ ಅನುಮತಿ
  • ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ ಜಿಟಿ) ಷರತ್ತುಬದ್ಧ ಅನುಮತಿಯನ್ನು ನೀಡಿದೆ.
  • ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಮತ್ತೆ ಇಳಿಕೆ
  • ಪೆಟ್ರೋಲ್, ಡೀಸೆಲ್ ದರ ಮತ್ತೆ ಇಳಿಕೆ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited