ಬೆಂಗಳೂರು : 2011ನೇ ಸಾಲಿನ ಕೆಪಿಎಸ್ ಸಿ 362 ಹುದ್ದೆಗಳ ನೇಮಕಾತಿ ರದ್ದು ಮಾಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೆ.ಎ.ಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ) ಮಧ್ಯಂತರ ತಡೆಯಾಜ್ನೆ ನೀಡಿದೆ.
ಆದೇಶಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೆ.ಎ.ಟಿ ಆದೇಶ ನೀಡಿದ್ದು, ಮುಂದಿನ ಆದೇಶದವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. 362 ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ನಡೆಸುವ ಸಂಬಂಧ ಹೊಸ ಅಧಿಸೂಚನೆ ಹೊರಡಿಸಬಾರದು. ಆಯ್ಕೆ ಪಟ್ಟಿ ರದ್ದತಿಯಿಂದ ಉದ್ಯೋಗ ವಂಚಿತರಾದ ಅಭ್ಯರ್ಥಿಗಳ ಹಿತಾಸಕ್ತಿಗೆ ಧಕ್ಕೆಯಾಗುವ ರೀತಿ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಸರ್ಕಾರಕ್ಕೆ ಕೆ.ಎ.ಟಿ ನಿರ್ದೇಶನ ನೀಡಿದೆ.
ಕೆ.ಎ.ಟಿ ಈ ಆದೇಶದಿಂದಾಗಿ ರದ್ದುಗೊಳಿಸಿದ 362 ಹುದ್ದೆಗಳಿಗೆ ಹೊಸದಾಗಿ ನೇಮಕ ನಡೆಸಲು ರಾಜ್ಯ ಸರ್ಕಾರ ಕೈಗೊಂಡಿದ್ದ ಸಿದ್ಧತೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.