ನವದೆಹಲಿ : ಕಾರ್ತಿಕ್ ವಿರುದ್ಧದ ನಟಿ ಮೈತ್ರೇಯ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಸದಾನಂದ ಗೌಡರಗೆ ಮಾಹಿತಿ ಕೇಳಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡ ನಟಿ ಮೈತ್ರೇಯಾ ಗೌಡ ಅವರಿಗೆ ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ನಟಿ ಮೈತ್ರೇಯಾ ಗೌಡ ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕಾರ್ತಿಕ್ ವಿರುದ್ಧ ವಂಚನೆ, ಬೆದರಿಕೆ, ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಎಫ್.ಐ.ಆರ್ ದಾಖಲಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸದಾನಂದ ಗೌಡರಿಗೆ ಮಹಿತಿ ನೀಡುವಂತೆ ಕೇಳಿದ್ದಾರೆ.
ಮಗನ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸದಾನಂದ ಗೌಡ, ನನ್ನ ಮಗನ ವಿರುದ್ಧ ಯುವತಿಯೊಬ್ಬಳ ಆರೋಪದಿಂದ ಆಘಾತವಾಗಿದೆ. ಇದರ ಹಿಂದೆ ಯಾರದೋ ಕುತಂತ್ರವಿದೆ. ಈ ಬಗ್ಗೆ ವಿಮರ್ಶೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೇಂದ್ರ ಗೃಹ ಸಚಿವರ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್ ಪೊಲೀಸ್ ನೇಮಕಾತಿ ವೇಳೆ ಅಭ್ಯರ್ಥಿಗಳಿಂದ ಹಣ ಪಡೆದು, ಭ್ರಷ್ಟಾಚಾರ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ವರದಿ ಬಿತ್ತರವಾಗುತ್ತಿರುವ ಬೆನ್ನಲ್ಲೇ, ರೈಲ್ವೆ ಸಚಿವರ ಪುತ್ರ ಕಾರ್ತಿಕ್ ಗೌಡರ ವಿರುದ್ಧ ಕೇಳಿ ಬರುತ್ತಿರುವ ವಂಚನೆ ಪ್ರಕರಣಗಳ ಹಿನ್ನಲೆಯಲ್ಲಿ ಕೇಂದ್ರ ಎನ್.ಡಿ.ಎ ಸರ್ಕಾರ ಮುಜುಗರಕ್ಕೀಡಾಗಿದೆ.