ಪಂಜಾಬ್ : 2007ರಲ್ಲಿ ನಡೆದ ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ಸ್ವಾಮಿ ಅಸೀಮಾನಂದಗೆ ಆ.28ರಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೈಲು ಸ್ಫೋಟ ಘಟನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್.ಐ.ಎ) ಆಸೀಮಾನಂದ ಹಾಗೂ ಇತರೆ ಮೂವರು ಆರೋಪಿಗಳ ವಿರುದ್ಧದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸುತ್ತಿತ್ತು. ರಾಷ್ಟ್ರವಿರೋಧಿ ಚಟುವಟಿಕೆ ಆರೋಪದಡಿ ಅಸೀಮಾನಂದ ಸೇರಿದಂತೆ 3 ವಿರುದ್ಧ ಎನ್.ಐ.ಎ ಚಾರ್ಜ್ ಶೀಟ್ ಕೂಡ ದಾಖಲಿಸಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಫೆಬ್ರವರಿಯಲ್ಲಿ ಅಸೀಮಾನಂದ ನೀಡಿದ್ದಾರೆಂಬ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿತ್ತು.
ಸಂಜೋತಾ ಎಕ್ಸ್ ಪ್ರೆಸ್ ರೈಲು ಬಾಂಬ್ ಸ್ಪೋಟ ಪ್ರಕರಣದಲ್ಲಿ ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪಾತ್ರವಿದೆ ಎಂದು ಪ್ರಕರಣದ ಪ್ರಮುಖ ಆರೋಪಿ ಅಸೀಮಾನಂದ ಸಂದರ್ಶನದಲ್ಲಿ ಹೇಳಿದ್ದಾರೆಂದು ಪತ್ರಿಕೆಯೊಂದು ವರದಿ ಮಾಡಿತ್ತು. ಆದರೆ ಇದನ್ನು ಅಲ್ಲಗಳೆದಿದ್ದ ಅಸೀಮಾನಂದ, ನಿಯತಕಾಲಿಕದಲ್ಲಿ ಪ್ರಕಟವಾದ ಸಂದರ್ಶನ ಸಳ್ಳು, ಆರ್.ಎಸ್.ಎಸ್ ವಿರುದ್ಧ ಅಪಪ್ರಚಾರ ಮಾಡಿದ್ದ ನಿಯತಕಾಲಿಕೆ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ್ದರು.
ಹರ್ಯಾಣದಿಂದ 160ಕಿ.ಮೀ ದೂರವಿರುವ ಪಾಣಿಪಟ್ ಸಮೀಪದ ದಿವಾನ ಎಂಬ ಗ್ರಾಮದ ಬಳಿ 2007ರ ಫೆ.18ರಂದು ಸಂಜ್ಯೋತಾ ಎಕ್ಸ್ ಪ್ರೆಸ್ ಲಿಂಗ್ ರೈಲು ಸ್ಫೋಟಗೊಂಡಿತ್ತು. ಸ್ಫೋಟದ ರುವಾರಿ ಅಸೀಮಾನಂದ ಎಂದು ಆರೋಪಿಸಲಾಗಿತ್ತು.