Untitled Document
Sign Up | Login    
Dynamic website and Portals
  
August 31, 2014

ವರ್ಷದಲ್ಲಿ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ಹುದ್ದೆ ಭರ್ತಿ: ರವಿಶಂಕರ್ ಪ್ರಸಾದ್

ಬೆಂಗಳೂರು : ವರ್ಷದೊಳಗೆ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್ ವರೆಗಿನ ಮಾಹಿತಿ ಪ್ರಕಾರ 4,382 ನ್ಯಾಯಾಂಗ ಅಧಿಕಾರಿಗಳ ಹುದ್ದೆ ಖಾಲಿ ಇದೆ. ಇವುಗಳಲ್ಲಿ ಶೇ.25ರಷ್ಟು ಹುದ್ದೆಗಳನ್ನು ಭರ್ತಿ ಮಾಡಲು ತಾತ್ವಿಕ ಅಂಗೀಕಾರ ದೊರೆತಿದೆ ಎಂದರು.

ನ್ಯಾಯಾಂಗ ಇಲಾಖೆ ನೇಮಕಾತಿಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಉಭಯ ಸದನಗಳ ಅಂಗೀಕಾರ ದೊರೆತಿದ್ದು, ರಾಜ್ಯಗಳಲ್ಲಿ ಈ ವಿಧೇಯಕ ಅನುಷ್ಠಾನಕ್ಕೆ ತಂದಾಗ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಲಿದೆ ಎಂದು ತಿಳಿಸಿದರು.

ನ್ಯಯಾಂಗ ವ್ಯವಸ್ಥೆಯಲ್ಲಿ ಮಾಹಿತಿ-ತಂತ್ರಜ್ನಾನ ಬಳಕೆಗೆ ಆದ್ಯತೆ ನೀಡಲಾಗುವುದು. 14 ಸಾವಿರ ಅಧೀನ ನ್ಯಾಯಾಲಯಗಳನ್ನು ಗಣಕೀಕರಣಗೊಳಿಸಲಾಗುವುದು. ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೇ ಉಳಿದಿರುವ ಅರ್ಜಿ ವಿಲೇವಾರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited