ತಿರುವನಂತಪುರಂ : ಕೇರಳದ ಆರ್.ಎಸ್.ಎಸ್ ಪದಾಧಿಕಾರಿ ಹತ್ಯೆ ಮಾಡಿರುವುದನ್ನು ಖಂಡಿಸಿ ಕರೆ ನೀಡಿದ್ದ ಕೇರಳ ಬಂದ್ ಯಶಸ್ವಿಯಾಗಿದೆ.
ಕಣ್ಣೂರು ಸೇರಿದಂತೆ ಹಲವು ಭಾಗಗಳಲ್ಲಿ ಕೆಲವು ಅಹಿತಕರ ಘಟನೆ ನಡೆದಿರುವುದನ್ನು ಹೊರತುಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್, ಆಟೋ ರಿಕ್ಷಾ, ವಾಹನಗಳು ರಸ್ತೆಗಿಳಿಯಲಿಲ್ಲ.
ಅಂಗಡಿ ಮುಂಗಟ್ಟುಗಳು, ವೃತ್ತಿಪರ ಕಾಲೇಜು, ವಿಶ್ವವಿದ್ಯಾಲಯಗಳು ಸೇರಿದಂತೆ ಶೈಕ್ಷಣಿಕ ಸಂಸ್ಥೆಗಳಿಗೆ ಸರ್ಕಾರಿ ರಜೆ ಘೋಷಿಸಲಾಗಿತ್ತು. ಕಣ್ಣೂರಿನ ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಾಡು ಮಾಡಿದ್ದರಿಂದ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಮುಸ್ಲಿಂ ಬಾಹುಳ್ಯವಿರುವ ಮಳಪ್ಪುರಂ, ಪಾಲಕ್ಕಾಡ್, ಇಡುಕಿ, ಕೊಟ್ಟಾಯಂ ಮತ್ತಿತರ ಜಿಲ್ಲೆಗಳಲ್ಲೂ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಸೆ.1ರಂದು ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಆರ್.ಎಸ್.ಎಸ್ ಪದಾಧಿಕಾರಿ ಮನೋಜ್ ನನ್ನು ಬರ್ಬರವಾಗಿ ಹತ್ಯೆ ಮಾಡಿತ್ತು. ಬಿಜೆಪಿ ರಾಷ್ಟ್ರಾದ್ಯಕ್ಷ ಅಮಿತ್ ಶಾ ಕೇರಳಕ್ಕೆ ಭೇಟಿ ನೀಡಿದ್ದ ವೇಳೇಯೇ ಆರ್.ಎಸ್.ಎಸ್ ಪದಾಧಿಕಾರಿಯನ್ನು ಹತ್ಯೆ ಮಾಡಲಾಗಿತ್ತು.