ಬೆಂಗಳೂರು : 'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ ಪ್ರಕರಣ ದಾಖಲಿಸಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಆರ್.ಟಿ ನಗರ ಪೊಲೀಸ್ ಅಧಿಕಾರಿಗಳು ಕಾರ್ತಿಕ್ ಗೌಡ ಅವರಿಗೆ 2ಬಾರಿ ನೊಟೀಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಕಾರ್ತಿಕ್ ಗೌಡ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಗೌಡರನ್ನು ಬಂಧಿಸಲು ವಾರೆಂಟ್ ಜಾರಿ ಮಾಡುವಂತೆ ಪೊಲೀಸರು ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ಗೆ ಮನವಿ ಮಾಡಿದ್ದರು.
ಪೊಲೀಸರ ಮನವಿ ಆಲಿಸಿದ ಕೋರ್ಟ್ ಕಾರ್ತಿಕ್ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಿದೆ. ಬಂಧನ ವಾರೆಂಟ್ ಪಡೆದಿರುವ ಪೊಲೀಸರು ಯಾವುದೇ ಕ್ಷಣದಲ್ಲಿ ಕಾರ್ತಿಕ್ ನನ್ನು ಬಂಧಿಸುವ ಸಾಧ್ಯತೆ ಇದೆ.
ಕೇಂದ್ರ ಸಚಿವ ಡಿ.ವಿ ಸದಾನಂದಾಗೌಡ ಪುತ್ರ ಕಾರ್ತಿಕ್ ಗೌಡ ವಿರುದ್ಧ ನಟಿ ಮೈತ್ರಿಯಾ ಗೌಡ ಅತ್ಯಾಚಾರ, ಅಪಹರಣ ಹಾಗೂ ವಂಚನೆ ಆರೋಪದಡಿ ಆರ್.ಟಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕಾರ್ತಿಕ್ ವಿರುದ್ಧ ಐಪಿಸಿ ಸೆಕ್ಷನ್ 420 ಮತ್ತು 376ರ ಅಡಿಯಲ್ಲಿ ಕೇಸ್ ದಾಖಲಾಗಿದೆ.