ನವದೆಹಲಿ : ದೆಹಲಿಯಲ್ಲಿ ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರಿಗೆ ಪತ್ರ ಬರೆದಿದ್ದಾರೆ.
ಈ ಮೂಲಕ ದೆಹಲಿಯಲ್ಲಿ ಸರ್ಕಾರ ರಚನೆಗೆ ಬಿಜೆಪಿ ಮತ್ತೆ ಕಸರತ್ತು ನಡೆಸಿದೆ. ಕೇಂದ್ರ ಗೃಹ ಇಲಾಖೆ ಹಾಗೂ ರಾಷ್ಟ್ರತಿಗಳಿಗೆ ಪತ್ರ ಬರೆದಿರುವ ಲೆಫ್ಟಿನೆಂಟ್ ಗವರ್ನರ್, ದೆಹಲಿಯಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತೆರವುಗೊಳಿಸಿ, ಬಿಜೆಪಿಗೆ ಅಧಿಕಾರ ರಚನೆಗೆ ಅವಕಾಶ ನೀಡಬೇಕು ಎಂದು ಕೋರಿದ್ದಾರೆ.
ವಿಧಾನಸಭೆಯಲ್ಲಿ ಒಟ್ಟು 70 ಸದಸ್ಯರಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಬೇಕು. ಈ ನಿಟ್ಟಿನಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಸರ್ಕಾರ ರಚನೆ ವಿಚಾರವಾಗಿ ನಾವು ಯಾವುದೇ ಕುದುರೆ ವ್ಯಾಪಾರ ನಡೆಸುವುದಿಲ್ಲ, ರಾಷ್ಟ್ರಪತಿಗಳು ಆಹ್ವಾನಿಸಿದರೆ ಮುಂದಿನ ಕ್ರಮಗಳಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ತಿಳಿಸಿದ್ದಾರೆ.