ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟದಿಂದಾಗಿ ಉಂಟಾಗಿರುವ ಪ್ರವಾಹ ಇನ್ನೂ ಮುಂದುವರೆದಿದ್ದು, ಸಾವಿನ ಸಂಖ್ಯೆ 90ಕ್ಕೆ ಏರಿಕೆಯಾಗಿದೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ 6 ದಶಕಗಳಿಂದ ಕಂಡುಕೇಳರಿಯದಷ್ಟು ಪ್ರಮಾಣದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಒಂದೆಡೆ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೆ ಇನ್ನೊಂದೆಡೆ ಭೂಕುಸಿತವುಂಟಾಗುತ್ತಿದೆ. ರಾಜ್ಯ ಸರ್ಕಾರ ಕಟ್ಟೆಚ್ಚ ಘೋಷಿಸಿದೆ.
ರಾಜೋರಿಯಲ್ಲಿ ಮನೆ ಕುಸಿದುಬಿದ್ದ ಪರುಣಾಮ 13 ಜನರು ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲೇ 17 ಜನರು ಸಾವನ್ನಪ್ಪಿದ್ದಾರೆ. ಈ ನಡುವೆ ಪ್ರವಾಹದಲ್ಲಿ ಸಿಲುಕಿದ್ದ 6000 ಸಂತ್ರಸ್ತರನ್ನು ಸೇನೆ ರಕ್ಷಿಸಿದೆ.
ಜಮ್ಮು-ಶ್ರೀನಗರ ನಡುವಿನ 300 ಕಿ.ಮೀ ಉದ್ದದ ಹೆದ್ದಾರಿಯನ್ನು ಎರಡನೇ ದಿನವೂ ಬಂದ್ ಮಾಡಲಾಗಿದ್ದು, ಇದರಿಂದಾಗಿ 1200 ವಾಹನಗಳು ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಸೆ.6ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.