ಬೆಂಗಳೂರು : ಜೆಡಿಎಸ್ ನಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು 2-3ದಿನಗಳಲ್ಲಿ ಕೋರ್ ಕಮಿಟಿ ರಚನೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ನಡೆದ ಜೆಡಿಎಸ್ ನಾಯಕರ ಸಭೆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಕೋರ್ ಕಮಿಟಿ್ ಸದಸ್ಯರ ಬಗ್ಗೆ ಚರ್ಚೆ ನಡೆಯಿತು ಎಂದರು.
2-3ದಿನಗಳಲ್ಲಿ ಜೆಡಿಎಸ್ ಕೋರ್ ಕಮಿಟಿ ಅಸ್ಥಿತ್ವಕ್ಕೆ ಬರಲಿದೆ. 11 ಜನರ ಕಮಿಟಿ ರಚಿಸಬೇಕು ಎಂದು ಎಂ.ಸಿ.ನಾಣಯ್ಯ ಒತ್ತಾಯಿಸಿದ್ದರು. ಆದರೆ 9 ಜನರ ಕಮಿಟಿ ರಚನೆಗೆ ದೇವೇಗೌಡರು ಸಲಹೆ ನೀಡಿದ್ದಾರೆ ಎಂದು ವಿವರಿಸಿದರು.
ಪಕ್ಷದಲ್ಲಿ ಭಿನ್ನಾಭಿಪ್ರಾಯವಿದೆ ಹೊರತು, ಭಿನ್ನಮತವಿಲ್ಲ, ಕೋರ್ ಕಮಿಟಿಯಲ್ಲಿ ಭಿನ್ನಮತಿಯರಿಗೆ ಸ್ಥಾನವಿಲ್ಲ, ಕೋರ್ ಕಮಿಟಿಯಲ್ಲಿ ಹೆಚ್.ಡಿ.ದೇವೇಗೌಡರ ಕುಟುಂಬದವರಿರುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ ಮೊದಲಾದ ವಿಚಾರಗಳು ಕೋರ್ ಕಮಿಟಿ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ತಿಳಿಸಿದರು.