ಬೆಂಗಳೂರು : ಮುಂದಿನ ವರ್ಷದ ಮೇ ತಿಂಗಳವರೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ಇದರಿಂದ ಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಅಕಾಂಕ್ಷಿಗಳಿಗೆ ತೀವ್ರ ನಿರಾಸೆಯಾಗಿದೆ
ಸರ್ಕಾರಕ್ಕೆ 2ವರ್ಷವಾದ ಬಳಿಕವಷ್ಟೇ ಸಂಪುಟ ಪುನಾರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದ್ದು, ಅಲ್ಲಿಯವರೆಗೆ ಸಂಪುಟ ವಿಸ್ತರಣೆ ನೆನೆಗುದಿಗೆ ಬೀಳಲಿದೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಿಂದ ಎದುರಾಗುವ ಅಪಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಸಂಪುಟದಲ್ಲಿ ನಿಷ್ಕ್ರಿಯವಾಗಿರುವ 5-6 ಸಚಿವರನ್ನು ಕೈಬಿಟ್ಟು ಖಾಲಿ ಇರುವ ನಾಲ್ಕು ಸ್ಥಾನಗಳಜತೆಗೆ ಒಟ್ಟು 10 ಜನರಿಗೆ ಹೊಸದಾಗಿ ಅವಕಾಶ ಕಲ್ಪಿಸಬಹುದೆಂದು ಹೇಳಲಾಗುತ್ತಿದೆ.
ಕೇವಲ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಿದಲ್ಲಿ ಅಸಮಾಧಾನ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ. ಈ ಎಲ್ಲಾ ನಿಟ್ಟಿನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಬಳಿಕ ಸಚಿವರ ಸಾಧನೆ ಒರೆಗೆ ಹಚ್ಚಿ ನಿರ್ಧಾರ ಕೈಗೊಳ್ಳಲು ಅವಕಾಶಗಳಿವೆ. ಅವಕಾಶ ವಂಚಿಂತ ಜಿಲ್ಲೆಗಳಿಗೆ ಸಂಪುಟದಲ್ಲಿ ಅವಕಾಶ ನೀಡಬೇಕಾದ ಅಗತ್ಯವಿದೆ.