ನವದೆಹಲಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡ್ಕರಿ ಜತೆ ರಾಜಿಗೆ ಒಪ್ಪಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ, ಎ.ಎ.ಪಿ ನೇತಾರ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಇದು ಪ್ರತಿಷ್ಠೆಗಾಗಿ ನಡೆಯುತ್ತಿರುವ ಪ್ರಕರಣವಾದ್ದರಿಂದ ಎರಡೂ ಬಣದವರನ್ನು ಕರೆದು ಮಾತನಾಡಿ ಪ್ರಕರಣವನ್ನು ಒಮ್ಮತದಿಂದ ಇತ್ಯರ್ಥ ಪಡಿಸಿಕೊಳ್ಳುವಂತೆ ಮನವೊಲಿಸಲು ಉಭಯ ತಂಡಗಳ ನ್ಯಾಯವಾದಿಗಳಿಗೆ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ನ್ಯಾಯಾಲಯಕ್ಕೆ ಉತ್ತರಿಸಿರುವ ಕೇಜ್ರಿವಾಲ್, ನಿತಿನ್ ಗಡ್ಕರಿ ಜತೆ ರಾಜಿಗೆ ಸಿದ್ಧ ಎಂದು ತೀಳಿಸಿದ್ದಾರೆ.
ಕಳೆದ ಲೋಕಸಭಾ ಚುನಾವಣೆ ವೇಳೆ ಭ್ರಷ್ಟರ ಪಟ್ಟಿಯನ್ನು ಅರವಿಂದ್ ಕೇಜ್ರಿವಾಲ್ ಬಿಡುಗಡೆ ಮಾಡಿದ್ದರು. ಇದರಲ್ಲಿ ನಿತಿನ್ ಗಡ್ಕರಿ ಹೆಸರು ಇದ್ದುದರಿಂದ ಗಡ್ಕರಿ ಕೇಜ್ರ್ವಾಲ್ ವಿರುದ್ಧ ಜೂ.6ರಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ಅ.16ರಂದು ನಡೆಯಲಿದೆ.