ಬೆಂಗಳೂರು : ಜಮ್ಮು-ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿ, ಅಲ್ಲಿನ ಪ್ರಹಾವದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ವಿಶೇಷ ಅಧಿಕಾರಿಗಳನ್ನು ಕಳುಹಿಸುವ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಿದರು.
ಬಳಿಕ ಮಾತನಾಡಿದ ಅವರು, ಹಿರಿಯ ಐಎ ಎಸ್ ಅಧಿಕಾರಿಯೊಬ್ಬರನ್ನು ಶ್ರೀನಗರಕ್ಕೆ ಕಳುಹಿಸಲಾಗಿದೆ. ದೆಹಲಿಯಲ್ಲಿನ ಸ್ಥಾನಿಕ ಆಯುಕ್ತರಿಗೂ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜಮ್ಮು-ಕಾಶ್ಮೀರದಲ್ಲಿ ಪ್ರವಾಹದಲ್ಲಿ 11ಜನರು ಸಿಲುಕಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಯತ್ನಿಸಲಾಗುತ್ತಿದೆ ಎಂದು ಭರವಸೆ ನೀಡಿದರು.
ಇದೇ ವೇಳೆ ವಿಧಾನಸೌಧ-ವಿಕಾಸಸೌಧಗಳ ನಡುವೆ ಮಾಹಾತ್ಮಾ ಗಾಂಧೀಜಿ ಪ್ರತಿಮೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.