ನವದೆಹಲಿ : 'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ.
ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು ಹೇಳಿದ್ದಾರೆ.
ಲವ್ ಜಿಹಾದ್ ದೇಶಕ್ಕೆ ಅಪಾಯಕರವಾಗಿದೆ. ವಿದೇಶದಿಂದ ಹಣ ಸಹಾಯ ಪಡೆಯುತ್ತಿರುವ ಮುಸ್ಲಿಂ ಸಂಘಟನೆಗಳು ಕುತಂತ್ರದಿಂದ ಹಿಂದೂ ಯುವತಿರನ್ನು ಮತಾಂತರ ಮಾಡುತ್ತಿದ್ದಾರೆ ಎಂದು ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ.
ಭಾರತದಲ್ಲಷ್ಟೇ ಅಲ್ಲದೇ ಅಮೆರಿಕಾದಲ್ಲೂ ಕ್ರಿಶ್ಚಿಯನ್ ಯುವತಿಯರನ್ನು ಮತಾಂತರ ನಡೆಯುತ್ತಿರುವುದರ ಬಗ್ಗೆಯೂ ಸ್ವಾಮಿ ಮಾಹಿತಿ ನೀಡಿದ್ದಾರೆ. ಇತ್ತೀಚೆಗಷ್ಟೆ ಲವ್ ಜಿಹಾದ್ ಬಗ್ಗೆ ಮಾತನಾಡಿದ್ದ ಆರ್.ಎಸ್.ಎಸ್ ಮುಖಂಡ ಮೋಹನ್ ಭಾಗವತ್, ಇಂದಿನ ಹಿಂದೂ ಯುವತಿಯರಿಗೆ ಲವ್ ಜಿಹಾದ್ ಬಗ್ಗೆ ಅರಿವು ಮೂಡಿಸಬೇಕಿದೆ. ಹಿಂದೂ ಯುವತಿಯರು ಮುಸ್ಲಿಂ ಯುವಕರ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು ಎಂದು ಹೇಳಿದ್ದರು.
ಮೋಹನ್ ಭಾಗವತ್ ಹೇಳಿಕೆಗೆ ಸುಬ್ರಹ್ಮಣ್ಯಂ ಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.