ನವದೆಹಲಿ : ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರದಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್.ಡಿ.ಐ)ಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಇದರಿಂದಾಗಿ ಅಭದ್ರತೆ ಎದುರಿಸುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಮಲ್ಟಿ ಬ್ರಾಂಡ್ ರೀಟೆಲ್ ಕ್ಷೇತ್ರದಲ್ಲಿ ಎಫ್.ಡಿ.ಐಗೆ ನಾವು ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲೂ ಇಲ್ಲ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಬಹುವಿಧ ಸರುಕುಗಳ ಚಿಲ್ಲರೆ ವ್ಯಾಪಾರದಲ್ಲಿ ಎಫ್.ಡಿ.ಐಗೆ ಅನುಮತಿ ನೀಡುವ ವಿಚಾರದಲ್ಲಿ ಬಿಜೆಪಿ ಈ ಹಿಂದೆಯೇ ಪ್ರಣಾಳಿಕೆಯಲ್ಲಿ ತನ್ನ ನಿಲುವು ಸ್ಪಷ್ಟಪಡಿಸಿತ್ತು. ಅದರ ಆಧಾರದಲ್ಲೇ ಚುನಾವಣೆಯಲ್ಲಿ ಗೆದ್ದುಬಂದಿದೆ ಎಂದರು.
ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಶೇ.51ರಷ್ಟು ಎಫ್.ಡಿ.ಐಗೆ ಹೂಡಿಕೆಗೆ ಹಿಂದಿನ ಯುಪಿಎ ಸರ್ಕಾರ ಅನುಮತಿ ನೀಡಿತ್ತು.