ಬೆಂಗಳೂರು : ತಾಲೂಕು ಪಂಚಾಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿಕಾಸಸೌಧದಲ್ಲಿ ನಡೆದ ಪಂಚಾಯತ್ ಪರಿಷತ್ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದರೆ ಸಾಕು. ತಾಲೂಕು ಪಂಚಯತ್ ಗೆ ಚುನಾವಣೆ ನಡೆಸುವ ಅಗತ್ಯವಿಲ್ಲ ನಾಮನಿರ್ದೇಶನ ಮಾಡಿದರೆ ಸರಿ ಎಂಬುದು ನನ್ನ ಅನಿಸಿಕೆ ಎಂದರು.
ರಾಜ್ಯದ 5629 ಗ್ರಾಮ ಪಂಚಾಯಿತಿಗಳಲ್ಲಿ ದಾಖಲಾತಿಗಳ ಗಣಕೀಕರಣಗೊಳಿಸಲಾಗುತ್ತಿದ್ದು, ಇ-ಸ್ವತ್ತಿನಲ್ಲಿ ದಾಖಲೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದು ನಕಲಿ ದಾಖಲೆಗಳನ್ನು ತಡೆಗಟ್ಟು ಸಾಧ್ಯ ಎಂದು ತಿಳಿಸಿದರು.
ಪಂಚಾಯತ್ ಗಳಲ್ಲಿ 5629 ಡಾಟಾ ಎಂಟ್ರಿ ಆಪರೇಟರ್ ಹಾಗೂ ತಾಂತ್ರಿಕ ಸಹಾಯಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
30 ಜಿಲ್ಲಾ ಪಂಚಾಯತ್ ಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಗಳನ್ನು ಜಾರಿಗೆ ತರಲಾಗಿದ್ದು, ಇದರಿಂದ ಅನಧೀಕೃತ ಬಡಾವಣೆಗಳ ಸೃಷ್ಟಿ ತಡೆಯಲು ಸಾಧ್ಯವಾಗುತ್ತದೆ ಎಂದರು.
ಇದೇ ವೇಳೆ ಜಮ್ಮು-ಕಶ್ಮೀರಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ನೆರವು ಘೋಷಿಸಿದ ಅವರು,
ಜಮ್ಮು-ಕಾಶ್ಮೀರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಲ್ಲಿ ಕರ್ನಾಟಕದ ಹಲವರು ಸಿಲುಕಿದ್ದಾರೆ. ಅವರ ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ ಎಂದರು.