ಮುಂಬೈ : 'ಲವ್ ಜಿಹಾದ್' ಎಂಬುದು ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ಅಂತಾರಾಷ್ಟ್ರೀಯವಾಗಿ ರೂಪಿಸಿರುವ ಕುತಂತ್ರ ಎಂದು ಎನ್.ಡಿ.ಎ ಮೈತ್ರಿ ಕೂಟದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಲವ್ ಜಿಹಾದ್ ಬಗ್ಗೆ ಚರ್ಚೆ ಕಾವೇರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ಹೇಳಿಕೆಯನ್ನು ಬೆಂಬಲಿಸಿರುವ ಉದ್ಧವ್ ಠಾಕ್ರೆ, ಸಾಮ್ನಾ ಸಂಪಾದಕೀಯದಲ್ಲಿ ಲವ್ ಜಿಹಾದ್ ನ್ನು ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ರೂಪಿಸಿರುವ ಅಂತಾರಾಷ್ಟ್ರೀಯ ಮಟ್ಟದ ಕುತಂತ್ರ ಎಂದು ಆರೋಪಿಸಿದ್ದಾರೆ.
ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಮದುವೆಯಾಗಿ ಬಲವಂತದಿಂದ ಮತಾಂತರ ಮಾಡುತ್ತಿದ್ದಾರೆ. ಮುಸ್ಲಿಂ ಯುವಕರ ಪಿತೂರಿಗೆ ಹಿಂದೂ ಯುವತಿಯರು ಬಲಿಯಾಗುತ್ತಿದ್ದಾರೆ ಎಂದು ಠಾಕ್ರೆ ಹೇಳಿದ್ದಾರೆ.
ಹಿಂದೂ ಯುವತಿಯರು ಲವ್ ಜಿಹಾದ್ ಗೆ ಬಲಿಯಾಗುತ್ತಿದ್ದಾರೆ. ಓರ್ವ ಹಿಂದೂ ಯುವತಿ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ 100 ಹಿಂದೂ ಯುವತಿಯರನ್ನು ಹಿಂದೂ ಧರ್ಮಕ್ಕೆ ವಾಪಸ್ ತರಬೇಕು ಎಂದು ಹೇಳುವ ಮೂಲಕ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಲವ್ ಜಿಹಾದ್ ವಿಷಯದ ಬಗ್ಗೆ ತೀವ್ರ ಚರ್ಚೆಯಾಗುವಂತೆ ಮಾಡಿದ್ದರು.