ನವದೆಹಲಿ : ಬಹುಕೋಟಿ 2ಜಿ ಹಗರಣದ ಆರೋಪಿಗಳನ್ನು ಭೇಟಿಯಾಗಿದ್ದ ಆರೋಪ ಎದುರಿಸುತ್ತಿರುವ ಸಿ.ಬಿ.ಐ ನಿರ್ದೇಶಕ ರಂಜಿತ್ ಸಿನ್ಹಾ ಸೆ.12ರಂದು ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದಾರೆ.
2ಜಿ ಹಗರಣದಲ್ಲಿ ರಂಜಿತ್ ಸಿನ್ಹಾ ವಿರುದ್ಧ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದ್ದರು. ಈ ಸಂಬಂಧ ಅಫಿಡವಿಟ್ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ರಂಜಿತ್ ಸಿನ್ಹಾ ಅವರಿಗೆ ಸೂಚಿಸಿತ್ತು.
ಅಫಿಡವಿಟ್ ಸಲ್ಲಿಸಿರುವ ಸಿನ್ಹಾ, ಬಹುಕೋಟಿ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿಗಳನ್ನು ಭೇಟಿ ಮಾಡಿರುವ ಆರೋಪಕ್ಕೆ ಉತ್ತರಿಸಿದ್ದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದಿದ್ದಾರೆ. ನನ್ನ ಮೇಲೆ ಮಾಡಿರುವ ಆರೋಪವನ್ನು ಕೈಬಿಡುವಂತೆ ಕೋರಿ ಸಿನ್ಹಾ ಅವರು ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ್ದಾರೆ.
2ಜಿ ಹಗರಣದ ಪ್ರಮುಖ ಆರೋಪಿಗಳು ಸಿಬಿಐ ಮುಖ್ಯಸ್ಥರನ್ನು ಪದೇ ಪದೆ ಭೇಟಿ ನೀಡಿದ್ದಾರೆ. ಹಗರಣದ ಕೆಲವು ಪ್ರಭಾವಿ ಆರೋಪಿಗಳನ್ನು ರಕ್ಷಿಸಲು ಸಿನ್ಹಾ ಯತ್ನಿಸಿದ್ದಾರೆ ಎಂದು ನ್ಯಾಯವಾದಿ ಪ್ರಶಾಂತ್ ಭೂಷಣ್ ಆರೋಪಿಸಿದ್ದರು. ಈ ಸಂಬಂಧ ಅಪಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಆದೇಶಿಸಿತ್ತು.