ಬೆಂಗಳೂರು : ರಾಜ್ಯದಲ್ಲಿ ಶ್ರೀರಾಮ ಸೇನೆಯನ್ನು ನಿಷೇಧಿಸುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್, ರಾಜ್ಯ ಸರ್ಕಾರ ಶ್ರೀರಾಮ ಸೇನೆಯನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಿ.ಎಂ ಹೇಳಿಕೆ ಬಗ್ಗೆ ಬೆಂಗಳೂರು ವೇವ್ಸ್ ನೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಗೋವಾ ಸರ್ಕಾರದ ನಿರ್ಧಾರವನ್ನೇ ಆಧಾರವಾಗಿಟ್ಟುಕೊಂಡಿರುವ ಸಿದ್ದರಾಮಯ್ಯ ಅವರು ಶ್ರೀರಾಮ ಸೇನೆ ನಿಷೇಧ ಮಾಡುವ ಬಗ್ಗೆ ಚಿಂತನೆ ನಡೆಸುವುದಾಗಿ ತಿಳಿಸಿದ್ದಾರೆ. ಆದರೆ ಗೋವಾದಲ್ಲಿ ಶ್ರೀರಾಮ ಸೇನೆ ಇಲ್ಲ. ಅಲ್ಲಿ ನಿಷೇಧ ಹೇರಿರುವುದು ಪ್ರಮೋದ್ ಮುತಾಲಿಕ್ ಎಂಟ್ರಿಗೇ ಹೊರತು ಶ್ರೀರಾಮಸೇನೆ ಸಂಘಟನೆಗೆ ಅಲ್ಲ ಅದನ್ನು ಸಿ.ಎಂ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ 7 ವರ್ಷಗಳಿಂದ ರಾಜ್ಯದಲ್ಲಿ ಶ್ರೀರಾಮಸೇನೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ದೇಶದ ಸಂಸ್ಕೃತಿಯನ್ನು ಉಳಿಸುವ ದೃಷ್ಠಿಯಿಂದ ಕಾರ್ಯನಿರ್ವಹಿಸುತ್ತಿರುವ . ಶ್ರೀರಾಮ ಸೇನೆ ಕಾನೂನು ಬಾಹೀರ ಚಟುವಟಿಕೆ ಮಾಡಿಲ್ಲ. ಆದ್ದರಿಂದ ರಾಜ್ಯದಲ್ಲಿ ಸಂಘಟನೆಯನ್ನು ನಿಷೇಧ ಮಾಡಲು ಸಾಧ್ಯವಿಲ್ಲ ಎಂದು ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಶ್ರೀರಾಮ ಸೇನೆ ನಿಷೇಧದಲ್ಲಿ ಗೋವಾ ಸರ್ಕಾರವನ್ನು ಅನುಕರಣೆ ಮಾಡಲು ಹೊರಟಿರುವ ಸಿದ್ದರಾಮಯ್ಯ ಸರ್ಕಾರ ವಿವಾದಕ್ಕೆ ಕಾರಣವಾಗಿದೆ.