ಬೆಂಗಳೂರು : 'ಜೆಡಿಎಸ್' ನಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆ ಬೇಸರ ತಂದಿದೆ ಎಂದು ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಸೆ.18ರಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬೇಸರ ಮೂಡಿಸಿದೆ. ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದರೂ ಬೇಡ, ಕೋರ್ ಕಮಿಟಿಯಲ್ಲಿ ಸ್ಥಾನ ನೀಡಿದರೂ ಅದನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ನನ್ನ ಕ್ಷೇತ್ರದ ಮತದಾರರಿಗೆ ನನ್ನನ್ನು ಸೀಮಿತಗೊಳಿಸುವೆ. ನಾನು ಯಾವುದೇ ಸ್ಥಾನದ ಆಕಾಂಕ್ಷಿಯಲ್ಲ. ಹಾಗಂತ, ಜೆಡಿಎಸ್ ತೊರೆಯುವ ಯಾವುದೇ ಚಿಂತನೆ ನಡೆಸಿಲ್ಲ ಎಂದು ಜಮೀರ್ ಸ್ಪಷ್ಟಪಡಿಸಿದ್ದಾರೆ.
ನಾನು ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗಳಸ್ಯ-ಕಂಠಸ್ಯರಿದ್ದೇವೆ. ಹೀಗಾಗಿ ನಮ್ಮ ನಡುವೆ ಭಿನ್ನಭಿಪ್ರಾಯ ಸಹಜ ಎಂದು ಜಮೀರ್ ಹೇಳಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ನಡೆದ ಪಕ್ಷದ ಶಾಸಕಾಂಗ ಪಕ್ಷದ ಸಭೆಗೆ ಗೈರು ಹಾಜರಾಗುವುದಾಗಿ ತಿಳಿಸಿದ್ದ ಹಿನ್ನೆಲೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಜಮೀರ್ ಅಹ್ಮದ್ ವಿರುದ್ಧ ಕಿಡಿ ಕಾರಿದ್ದರು.
ಜಮೀರ್ ಅಹ್ಮದ್ ಅವರಿಗೆ ಪಕ್ಷದ ಸಭೆಗೆ ಹಾಜರಾಗುವಂತೆ ಎರಡು ಬಾರಿ ಕನ್ನಡದಲ್ಲಿ ಪತ್ರ ಬರೆಯಲಾಗಿತ್ತು, ಬಹುಶಃ ಅವರಿಗೆ ಉರ್ದು ಅಥವಾ ಇಂಗ್ಲೀಷ್ ನಲ್ಲಿ ಪತ್ರ ಬರೆಯಬೇಕಿತ್ತು, ಕನ್ನಡದಲ್ಲಿ ಪತ್ರ ಬರೆದು ತಪ್ಪು ಮಾಡಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದರು