Untitled Document
Sign Up | Login    
Dynamic website and Portals
  
September 18, 2014

ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಪತ್ರ

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್

ಬೆಂಗಳೂರು : ಕೆಪಿಸಿಸಿ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸದ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲೇ ಎಲ್ಲಾ ಸಚಿವರು ಪ್ರತಿ ತಿಂಗಳು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸುವಂತೆ ಎಐಸಿಸಿ ಸೂಚನೆ ನೀಡಿತ್ತು. ಈ ಹಿನ್ನಲೆಯಲ್ಲಿ ಪರಮೇಶ್ವರ್ ಕೂಡ ಈ ಬಗ್ಗೆ ಸಚಿವರಿಗೆ ಗಂಭೀರವಾಗಿ ತಿಳಿಸಿದ್ದರು.

ಆರಂಭದಲ್ಲಿ ಎಲ್ಲಾ ಸಚಿವರು ಕೆಪಿಸಿಸಿ ಕಛೇರಿಗೆ ಭೇಟಿ ನೀಡಿದ್ದರು. ಆದರೆ ಕೆಲ ದಿನಗಳ ನಂತರ ಅನೇಕ ಸಚಿವರು ಕೆಪಿಸಿಸಿಯತ್ತ ತಲೆಹಾಕಿಲ್ಲ, ಇದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣವಾಗಿದೆ.

ಈ ನಿಟ್ಟಿನಲ್ಲಿ ಪರಮೇಶ್ವರ್ ಕೆಪಿಸಿಸಿ ಕಛೇರಿಗೆ ಭೇಟಿ ನೀಡದ ಸಚಿವರಿಗೆ ಕಾರಣ ಕೇಳಿ ಪತ್ರ ಬರೆದಿದ್ದಾರೆ. ಕೆಪಿಸಿಸಿ ಕಛೇರಿಗೆ ಭೆಟಿ ನೀಡದ ಸಚಿವರ ಪಟ್ಟಿಯಲ್ಲಿ ಘಟಾನುಘಟಿ ಸಚಿವರುಗಳ ಹೆಸರೇ ಇರುವುದು ವಿಶೇಷ. ಲೋಕೋಪಯೋಗಿ ಸಚಿವ ಹೆಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಮಹದೇವ್ ಪ್ರಸಾದ್, ವಸತಿ ಸಚಿವ ಅಂಬರೀಷ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ, ರಮಾನಾಥ್ ರೈ, ಅಭಯ ಚಂದ್ರ ಜೈನ್ ಸೇರಿದಂತೆ ಸಂಪುಟದ ಹಲವರ ಹೆಸರಿದೆ.

ಕೆಪಿಸಿಸಿ ಕಛೇರಿಗೆ ಭೇಟಿ ನೀಡದ ಬಗ್ಗೆ ರಾಜ್ಯ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗಿತ್ತು. ಅಲ್ಲದೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕೂಡ ಅಸಮಾಧಾನ ವ್ಯಕ್ತಪಡಿಸಿ, ಸಭೆಯಲ್ಲೇ ಹಾಜರಿ ಪುಸ್ತಕ ಕೇಳಿದ್ದರು. ಅಲ್ಲದೇ ಕೆಪಿಸಿಸಿ ಕಛೇರಿಗೆ ಬಾರದಿರುವ ಬಗ್ಗೆ ಸ್ಪಷ್ಟನೆ ಕೇಳುವಂತೆ ಪರಮೇಶ್ವರ್ ರಿಗೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪರಮೇಶ್ವರ್ ಪತ್ರ ಬರೆದಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited