ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಉಂಟಾಗಿರುವ ಅತಿವೃಷ್ಠಿ-ಅನಾವೃಷ್ಠಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ರೈತರಿಗೆ ನೀಡುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕೆಂದು ಮನವಿ ಮಾಡಿದ್ದಾರೆ.
ಪ್ರಕೃತಿ ವಿಕೋಪಕ್ಕೆ ತುತ್ತಾಗಿರುವ ಬೀದರ್, ಗುಲ್ಬರ್ಗಾ, ರಾಯಚೂರು, ಯಾದಗಿರಿ, ಕೊಪ್ಪಳ, ಬಾಗಲಕೋಟೆ ಬಿಜಾಪುರ, ಗದಗ, ಧಾರವಾಡ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಹೆಚ್.ಡಿ ಕುಮಾರಸ್ವಾಮಿ, ಸಿ.ಎಂ ಸಿದ್ದರಾಮಯ್ಯ ಅವರನ್ನು ಕೋರಿದ್ದಾರೆ. ಭಾರಿ ಮಳೆಯಿಂದಾಗಿ ಜನತೆ ತ್ತರಿಸಿದ್ದಾರೆ. ಘಟನೆಯಿಂದಾಗಿ 400 ಕೋಟಿ ಮೌಲ್ಯದ ಆಸ್ತಿ ಹಾನಿ ಸಂಭವಿಸಿದೆ ಎಂದು ನೀವೇ ಹೇಳಿದ್ದೀರಾ ಆದರೆ ವಾಸ್ತವವಾಗಿ 5 ಸಾವಿರ ಕೋಟಿಗಿಂತಲೂ ಹೆಚ್ಚಿನ ಹಾನಿ ಸಂಭವಿಸಿದ್ದು ರೈತರಿಗೆ ಸರ್ಕಾರ ನೀಡುತ್ತಿರುವ ಪರಿಹಾರ ಧನ ಸಾಲುತ್ತಿಲ್ಲ ಎಂದು ಹೆಚ್.ಡಿ.ಕೆ ಸಿ ಪತ್ರದಲ್ಲಿ ತಿಳಿಸಿದ್ದಾರೆ.
ಕಳೆದ ಆಯವ್ಯಯದಲ್ಲಿ ಸರ್ಕಾರ ರೈತರ ಬೆಳಗೆ ವೈಜ್ನಾನಿಕ ಬೆಲೆ ನೀಡುವುದಾಗಿ ಘೋಷಿಸಿತ್ತು. ಆದರೆ ಈಗ ಸರ್ಕಾರದ ಭರವಸೆ ಹುಸಿಯಾಗಿದೆ. ಅಲ್ಲದೇ ಬೆಳೆವಿಮೆ ಸಹ ಸರಿಯಾಗಿಲ್ಲ ಎಂದು ಆರೋಪಿಸಿರುವ ಹೆಚ್.ಡಿ.ಕೆ, ವಿಮೆಯಿಂದಾಗಿ ರೈತರಿಗೆ ಉಂಟಾಗಿರುವ ನಷ್ಟ ಸರಿದೂಗಿಸಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಪ್ರಕೃತಿ ವಿಕೋಪಕ್ಕೆ ಗುರಿಯಾಗಿರುವ ರೈತರಿಗೆ ಪ್ರತಿ ಎಕರೆಗೆ 20 ಸಾವಿರ ರೂಪಾಯಿ ಪರಿಹಾರ ಘೋಷಿಸಬೇಕೆಂದು ಸಿ.ಎಂ ಗೆ ಒತ್ತಾಯಿಸಿದ್ದಾರೆ. ಇದೇ ವೇಳೆ ಮನೆ ಹಾನಿ ಪರಿಹಾರ ಮೊತ್ತವನ್ನು 50ಸಾವಿರಕ್ಕೆ ಏರಿಕೆ ಮಾಡಬೇಕೆಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.