BW News Bureau : ಸೆ.21ರಿಂದ ಯಶವಂತಪುರ-ಪೀಣ್ಯ ಕೈಗಾರಿಕಾ ಪ್ರದೇಶಗಳವರೆಗೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಪಿಣ್ಯ ಕೈಗಾರಿಕಾ ಪ್ರದೇಶ ಹಾಗೂ ಜಾಲಹಳ್ಳಿ ನಿಲ್ದಾಣಗಳ ನಡುವೆ ವಿದ್ಯುತ್ ಸಂಪರ್ಕ ಜಾಲ ಅಳವಡಿಕೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.21ರಿಂದ ಸೆ.25ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಮಂತ್ರಿ ಸ್ಕ್ವೇರ್ ಬಳಿಯ ಸಂಪಿಗೆ ರಸ್ತೆಯಿಂದ ಯಶವಂತಪುರ ವರೆಗೆ ಮಾತ್ರ ಎಂದಿನಂತೆ ಬೆಳಿಗ್ಗೆ 6ಗಂಟೆಯಿಂದ ರಾತ್ರಿ 10ಗಂಟೆವರೆಗೆ ನಮ್ಮ ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್ ಸಿ ತಿಳಿಸಿದೆ.