Untitled Document
Sign Up | Login    
Dynamic website and Portals
  
September 22, 2014

ಡಿ.ಕೆ ಸಹೋದರರು ದಾಖಲೆ ತಿರುಚುವುದರಲ್ಲಿ ನಿಸ್ಸೀಮರು-ಹೆಚ್.ಡಿ ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

ರಾಮನಗರ : ಇಂಧನ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ ಸುರೇಶ್ ರಾಮನಗರದಲ್ಲಿ ಕಳೆದ 25 ವರ್ಷಗಳಿಂದ ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದರೂ ಅವರಿಗೆ ಯಾವುದೇ ಶಿಕ್ಷೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸೆ.22ರಂದು ರಾಮನಗರದಲ್ಲಿ ಮಾತನಾಡಿರುವ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ನಡೆಸಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಚಾರ್ಜ್ ಶೀಟ್ ಹಾಕಿದ್ದರೂ ಅವರಿಗೆ ಶಿಕ್ಷೆಯಾಗುವುದಿಲ್ಲ ಏಕೆಂದರೆ ಶಿವಕುಮಾರ್ ಅವರು ತಮಗೆ ಬೇಕಾದ ರೀತಿಯಲ್ಲಿ ಚಾರ್ಜ್ ಶೀಟ್ ನ್ನು ಬದಲಾಯಿಸುತ್ತಾರೆ. ಅಧಿಕಾರದ ಪ್ರಭಾವ ಬಳಸಿ ಡಿ.ಕೆ.ಶಿ ಎಂತಹ ದಾಖಲೆಗಳನ್ನು ಬೇಕಾದರೂ ತಿದ್ದುತ್ತಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ದಾಖಲೆಗಳನ್ನು ತಿರುಚುವುದರಿಂದಲೇ ಡಿ.ಕೆ.ಶಿ ಸಹೋದರರಿಗೆ ಶಿಕ್ಷೆಯಾಗುತ್ತಿಲ್ಲ. ತಮ್ಮ ಅನುಕೂಲಕ್ಕೆ ತಕ್ಕಂತೆ ದಾಖಲೆಗಳನ್ನು ತಿರುಚುವವರಿಗೇ ಈಗ ಕಾಲವಿರುವುದೆಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಹಸುಗಳ ಎಲುಬುಗಳಿಂದ ಡಾಲ್ಡಾ, ಪೌಡರ್ ಮತ್ತಿತರ ವಸ್ತುಗಳ ತಯಾರಿಕೆ ಮಾಡುತ್ತಿದ್ದಾರೆನ್ನಲಾದ ಅಕ್ರಮ ಅಡ್ಡೆಗಳ ಕುರಿತು ಸುದ್ದಿ ಮಾಡಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿಸಿರುವುದನ್ನು ಇದೇ ವೇಳೆ ಕುಮಾರಸ್ವಾಮಿ ಖಂಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited