Untitled Document
Sign Up | Login    
Dynamic website and Portals
  
September 27, 2014

ಜಯಲಲಿತಾ ಅಕ್ರಮ ಆಸ್ತಿಗಳಿಕೆ ತೀರ್ಪು ಪ್ರಕಟ: ಆರೋಪ ಸಾಬೀತು

ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದ್ದು, ಮುಖ್ಯಮಂತ್ರಿ ಜಯಲಲಿತಾ ತಪ್ಪಿತಸ್ಥೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಆವರಣದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ, ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣದ ಕುರಿತಿ ಈಗಾಗಲೇ ತೀರ್ಪು ಪ್ರಕಟಿಸಿದ್ದು, ಜಯಲಲಿತಾ ದೋಷಿ ಎಂದು ತೀರ್ಪು ನೀಡಿದ್ದಾರೆ.

ಭ್ರಷ್ಟಾಚಾರ ತಡೆ ಕಾಯ್ದೆ 13(1)ಇ ಅಡಿ ಆರೋಪ ಸಾಬೀತಾಗಿದ್ದು, ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅಪರಾಧಿ ಎಂದು ನ್ಯಾಯಾಲಯ ತಿಳಿಸಿದೆ. ಆದರೆ ಶಿಕ್ಷಪ್ರಮಾಣ ಪ್ರಕಟವಾಗುವುದು ಮಾತ್ರ ಬಾಕಿಯಿದೆ.

ಈ ತೀರ್ಪಿನ ಹಿನ್ನಲೆಯಲ್ಲಿ ಜಯಲಲಿತಾ ಅವರನ್ನು ಬಂಧಿಸುವ ಸಾಧ್ಯತೆಯಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ. ಅಲ್ಲದೇ 6 ವರ್ಷಗಳವರೆಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳ್ಳುತ್ತಾರೆ.

ಆದಾಯಕ್ಕೂ ಮೀರಿ ಆಸ್ತಿಗಳಿಕೆ ಕುರಿತು ಡಿಎಂಕೆ ದೂರಿನನ್ವಯ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಂಡಾಗ 28 ಕೆ.ಜಿ ಚಿನ್ನ, 12 ಸಾವಿರ ಸೀರೆಗಳು, ಕೊಡನಾಡು, ತಿರುನೆಲ್ವೇಲಿಯಲ್ಲಿ ತಲಾ1 ಸಾವಿರ ಎಕರೆ ಜಮೀನು, 100ಕ್ಕೂ ಹ್ಯೆಚ್ಚು ಬ್ಯಾಂಕ್ ಖಾತೆಗಳು ಪತ್ತೆಯಾಗಿದ್ದವ್ವು. ಈ ಹಿನ್ನಲೆಯಲ್ಲಿ 1996ರಲ್ಲಿ ಸೆ.18 ರಂದು ಜಯಲಲಿತಾ ಮತ್ತು ಅವರ ದತ್ತುಪುತ್ರ ಸುಧಾಕರನ್, ಸ್ನೇಹಿತೆ ಶಶಿಕಲಾ ನಟರಾಜನ್, ಜೆ.ಇಳವರಸಿ ವಿರುದ್ಧ ಪ್ರಕರಣ ದಾಖಲಾಗಿತ್ತು.

1997ರಲ್ಲಿ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿತ್ತು. ಮುಕ್ತ ಮತ್ತು ನ್ಯಾಯಸಮ್ಮತ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ 2001 ರಲ್ಲಿ ಬೆಂಗಳೂರಿನಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಿ ವಿಚಾರಣೆ ನಡೆಸುವಂತೆ ಆದೇಶ ನೀಡಿತ್ತು. ಕಳೆದ 18 ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಅಂತಿಮವಾಗಿ ಸಿಎಂ ಜಯಲಲಿತಾ ವಿರುದ್ಧದ ಆರೋಪ ಸಾಬೀತಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited