ಬೆಂಗಳೂರು : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾಗೆ ಜೈಲು ಶಿಕ್ಷೆಯಾಗಿರುವುದಕ್ಕೆ ಕರ್ನಾಟಕವನ್ನು ದೂಷಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ ಜೈಲು ಶಿಕ್ಷೆಯಾಗಲು ಕರ್ನಾಟಕ ಕಾರಣವಲ್ಲ, ಕೋರ್ಟ್ ತೀರ್ಪಿಗೂ ರಾಜ್ಯಕ್ಕೂ ಯಾವುದೇ ಸಂಬಂಧವಿಲ್ಲ, ರಾಜ್ಯದಲ್ಲಿ ತೀರ್ಪು ಪ್ರಕಟವಾಗಿದೆಯಷ್ಟೆ. ಇದರಲ್ಲಿ ರಾಜ್ಯದ ಕೈವಾಡವಿಲ್ಲ. ಕೋರ್ಟ್ ಆದೇಶವನ್ನು ರಾಜ್ಯಸರ್ಕಾರ ಪಾಲಿಸುತ್ತಿದೆ ಎಂದರು.
ತಮಿಳುನಾಡಿನಲ್ಲಿ ಜನಸಾಮಾನ್ಯರ ನಡುವೆ ಅನಗತ್ಯ ವದಂತಿಗಳು ಹಬ್ಬುತ್ತಿದ್ದು, ಕರ್ನಾಟಕದಲ್ಲಿ ವಿಚಾರಣೆ ನಡೆದ ಕಾರಣಕ್ಕಾಗಿಯೇ ಜಯಲಲಿತಾ ಅವರಿಗೆ ಶಿಕ್ಷೆಯಾಗಿದೆ ಎಂದು ಆರೋಪಿಸಲಾಗುತ್ತಿದೆ. ಇದರಲ್ಲಿ ರಾಜ್ಯದ ಕೈವಾಡವಿಲ್ಲ ಎಂದು ತಿಳಿಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದ್ದು, ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ನಿಡುವುದಿಲ್ಲ ಎಂದು ತಿಳಿಸಿದರು.