ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್ ಜೇಠ್ಮಲಾನಿ ವಾದ ಮಂಡಿಸಲಿದ್ದಾರೆ.
ಜಯಲಲಿತಾ ವಿರುದ್ಧದ ತೀರ್ಪಿಗೆ ತಡೆ ಕೋರಿ ಹಾಗೂ ಶಿಕ್ಷೆ ಅಮಾನತಿಗೂ ಮೇಲ್ಮನವಿ ಅರ್ಜಿ ಸಲ್ಲಿಸಲ್ಲಿಸಲಿದ್ದಾರೆ. ಪ್ರಸ್ತುತ ರಾಜ್ಯ ಹೈಕೋರ್ಟ್ ಗೆ ರಜೆ ಇದ್ದು, ಸೆ.30 ಮತ್ತು ಅ.1ರಂದು ರಜಾಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಿಸಲಿದ್ದು, ವಿಚಾರಣೆ ಕೈಗೆತ್ತಿಕೊಳ್ಳಲಿವೆ.
ಇದೇ ವೇಳೆ ಜಯಲಲಿತಾ ಅವರೊಂದಿಗೆ ಜೈಲು ಶಿಕ್ಷೆಗೆ ಗುರಿಯಾಗಿರುವ ಪ್ರಕರಣದ ಇತರೆ ಅಪರಾಧಿಗಳಾದ ವಿ.ಕೆ.ಶಶಿಕಲಾ, ದತ್ತುಪುತ್ರ ಸುಧಾಕರನ್ ಮತ್ತು ಜೆ.ಇಳವರಸಿ ಅವರೂ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿದ್ದಾರೆ.