ಮುಂಬೈ : ಬಿಜೆಪಿ ಜತೆಗಿನ 25 ವರ್ಷಗಳ ಮೈತ್ರಿ ಮುರಿದುಬಿದ್ದ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್.ಡಿ.ಎ ಕೂಟದಿಂದ ನಿರ್ಗಮಿಸಲು ಶಿವಸೇನೆ ಚಿಂತನೆ ನಡೆಸಿದೆ.
ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಶಿವಸೇನೆಯ ಏಕೈಕ ಸಂಸದ ಅನಂತ ಗೀತೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಪ್ರಧಾನಿ ಮೋದಿ ಅಮೆರಿಕಾ ಪ್ರವಾಸದಿಂದ ಹಿಂತಿರುಗುತ್ತಿದ್ದಂತೆಯೇ ಅನಂತ ಗೀತೆ ಅವರು ಮೋದಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
18 ಸಂಸದರನ್ನು ಹೊಂದಿರುವ ಶಿವಸೇನೆ, ಎನ್.ಡಿ.ಎ ಕೋಟದಲ್ಲಿ ಬಿಜೆಪಿ ನಂತರ ಎರಡನೇ ಅತಿದೊಡ್ಡ ಪಕ್ಷವಾಗಿದೆ. ಆದರೂ ಪ್ರಧಾನಿ ಮೋದಿ ಕೇವಲ 1 ಸಚಿವ ಸ್ಥಾನ ಕೊಟ್ಟಿದ್ದರ ಬಗ್ಗೆ ಆರಂಭದಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸ್ದಿತ್ತು.