Untitled Document
Sign Up | Login    
Dynamic website and Portals
  
September 30, 2014

ರೈತರನ್ನು ಒಕ್ಕಲೆಬ್ಬಿಸುವ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿ

ಸಿಎಂ ಸಿದ್ದರಾಮಯ್ಯನವರಿಗೆ ಶೆಟ್ಟರ್ ಸವಾಲು

ಜಗದೀಶ್ ಶೆಟ್ಟರ್ ಜಗದೀಶ್ ಶೆಟ್ಟರ್

Udupi : ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ.

ಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ. ಬಡ ರೈತರನ್ನು ಒಕ್ಕಲೆಬ್ಬಿಸುವ ಬದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ಭೂ ಕಬಳಿಕೆ ಮಾಡುವವರನ್ನು ಒಕ್ಕಲೆಬ್ಬಿಸಲಿ. ಇಲ್ಲ ರಾಜಕಾಲುವೆ ಒತ್ತುವರಿ ಮಾಡಿಕೊಳ್ಳುವವರ ವಿರುದ್ಧವಾದರೂ ಕನಿಷ್ಠ ಕ್ರಮ ಕೈಗೊಳ್ಳಲಿ ಎಂದರು.

ಜೀವನೋಪಾಯಕ್ಕಾಗಿ ಕೃಷಿ ಭೂಮಿಯನ್ನು ಅವಲಂಬಿಸಿಕೊಂಡಿರುವ ರೈತರನ್ನು ಒಕ್ಕಲೆಬ್ಬಿಸಿದರೆ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಜನಬಲದಿಂದ ಒಕ್ಕಲೆಬ್ಬಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ವಿಭಜನೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶೆಟ್ಟರ್, ಮೇಶ್ ಕತ್ತಿಯವರಿಗೆ ಇಂತಹ ಹೆಳಿಕೆ ನೀಡದಂತೆ ತಿಳುವಳಿಕೆ ಹೇಳಲಾಗಿದೆ. ಅವರು ನೀಡಿರುವ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಅದು ಅವರ ವಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited