ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ. ಜಾಮೀನು ಅರ್ಜಿ ವಿಚಾರಣೆ ನಡೆಯಲಿರುವ ಹಿನ್ನಲೆಯಲ್ಲಿ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ತಮಿಳುನಾಡಿನಿಂದ ಈಗಾಗಲೇ ಅಪಾರ ಸಂಖ್ಯೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಜಯಲಲಿತಾ ಅವರಿಗೆ ಜಾಮೀನು ಸಿಕ್ಕಲ್ಲಿ ಸಂಭ್ರಮಾಚರಣೆ ಆಚರಿಸುವ ಸಾಧ್ಯತೆಯಿದೆ. ಒಂದು ವೇಳೆ ಜಾಮೀನು ಸಿಗದಿದ್ದಲ್ಲಿ ಪ್ರತಿಭಟನೆಗಳು ಹೆಚ್ಚುವ ಸಾಧ್ಯತೆಯಿದೆ.
ಈ ಹಿನ್ನಲೆತಲ್ಲಿ ಮುಂಜಾಗೃತಾ ಕ್ರಮವಾಗಿ ಈಗಾಗಲೇ ನಿಷೆಧಾಜ್ನೆ ಜಾರಿಗೊಳಿಸಲಾಗಿದ್ದು, ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹರ ಸುತ್ತಮುತ್ತ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ.
ಜಂಟಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ 4 ಡಿಸಿಪಿ, 12ಎಸಿಪಿ, 30 ಇನ್ಸ್ ಪೆಕ್ಟರ್, 60 ಸಬ್ ಇನ್ಸ್ ಪೆಕ್ಟರ್, 15 ಕೆ ಎಸ್ ಆರ್ ಪಿ ತುಕಡಿ, 15 ಸಿಎ ಆರ್ ತುಕಡಿ ಸೇರಿದಂತೆ ಸಾವಿರಕ್ಕು ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.