ಬೆಂಗಳೂರು : ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ. ಹಲವು ದಿನಗಳಿಂದ ಟೌನ್ ಹಾಲ್ ಎದುರು ಸರ್ಕಾರದ ವಿರುದ್ಧ ಧರಣಿ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅ.7ರ ಮಧ್ಯಾಹ್ನ 3 ಗಂಟೆಗೆ ಭೂಕಬಳಿಕೆ ವಿರುದ್ಧ ಹೋರಾಟ ನಡೆಸುತ್ತಿರುವವರೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಭಾಗವಹಿಸಲಿದ್ದಾರೆ.
ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಕಬಳಿಸಿರುವವರ ವಿರುದ್ಧ ಕ್ರಮ ಜರುಗಿಸುವಂತೆ ಮತ್ತು ಕರ್ನಾಟಕ ಭೂಕಬಳಿಕೆ ನಿಷೇಧ ಮಸೂದೆ ಜಾರಿಗೆ ಆಗ್ರಹಿಸಿ ಭೂಕಬಳಿಕೆ ವಿರೋಧಿ ಹೋರಾಟ ಸಮಿತಿ ಸದಸ್ಯರು ಕಳೆದ ಹಲವು ದಿನಗಳಿಂದ ಟೌನ್ ಹಾಲ್ ಎದುರು ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಸರ್ಕಾರ ಈ ವರೆಗೂ ಸ್ಪಂಧಿಸದೇ ಇದ್ದ ಹಿನ್ನೆಲೆಯಲ್ಲಿ ಅ.6ರಿಂದ ಉಪವಾಸ ಸತ್ಯಾಗ್ರಹ ಸತ್ಯಾಗ್ರಹ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೋರಾಟಗಾರರನ್ನು ಭೇಟಿ ಮಾಡಿ ಚರ್ಚೆ ನಡೆಸಲು ತೀರ್ಮಾನಿಸಿದ್ದಾರೆ. ಈ ಸಮಿತಿಯಲ್ಲಿ ಎಚ್. ಎಸ್.ದೊರೆಸ್ವಾಮಿ ಮತ್ತು ವಿ.ಬಾಲಸುಬ್ರಮಣಿಯನ್ ಸಮಿತಿ ಸಂಚಾಲಕ ಎ.ಟಿ.ರಾಮಸ್ವಾಮಿ ಭಾಗವಹಿಸಿದ್ದಾರೆ.
ನಿರಂತರ ಪ್ರತಿಭಟನೆ ಫಲವಾಗಿ ಅ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋರಾಟಗಾರರನ್ನು ಭೇಟಿ ಮಾಡಲು ತೀರ್ಮಾನಿಸಿದ್ದಾರೆ.